July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಲು ಆ.31 ಕೊನೆಯ ದಿನಾಂಕ

ಬೆಳ್ತಂಗಡಿ: ಪಡಿತರ ಚೀಟಿದಾರರು ಪ್ರತೀ ತಿಂಗಳು ಪಡಿತರ ಪಡೆಯುವುದಲ್ಲದೆ ಅನ್ನ ಭಾಗ್ಯ ನೇರ ನಗದು ವರ್ಗಾವಣೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಸರಕಾರವು ಕಳೆದ 5 ವರ್ಷಗಳಿಂದ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವಂತೆ ನಿರ್ದೇಶನ ನೀಡಿದ್ದರೂ ಕೆಲವೊಂದು ಪಡಿತರ ಚೀಟಿ ಸದಸ್ಯರು ಇನ್ನೂ ಇ-ಕೆವೈಸಿ ಮಾಡದೇ ಇರುವುದು ಕಂಡುಬರುತ್ತಿದೆ. ಪ್ರಸ್ತುತ ಸರಕಾರವು ಯಾವುದೇ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಲೂ ಕೂಡಾ ಅವಕಾಶ ಕಲ್ಪಿಸಿರುತ್ತದೆ. ಜೀವಮಾಪನ ನೀಡಿ ಇ-ಕೆವೈಸಿ ಮಾಡಿಸಲು ಬಾಕಿ ಇರುವ ಸದಸ್ಯರು ಕೂಡಲೇ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಇ-ಕೆವೈಸಿ ಮಾಡುವುದು. ಸರಕಾರವು ಆ.31 ರವರೆಗೆ ಅವಕಾಶ ಕಲ್ಪಿಸಿದ್ದು ತಪ್ಪದೆ ಇ-ಕೆವೈಸಿ ಮಾಡಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ವಲಸೆ ಹೋಗಿ ಅಥವಾ ಬೇರೆ ಜಿಲ್ಲೆಗಳಿಗೆ ಕೆಲಸ ನಿಮಿತ್ತ ತೆರಳಿರುವ ವ್ಯಕ್ತಿಗಳು ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಜೀವಮಾಪನ ನೀಡಬಹುದಾಗಿದ್ದು ಈ ಅವಕಾಶವನ್ನು ಸದುಪಯೋಗ ಪಡಿಸಿ ಇ-ಕೆವೈಸಿಯನ್ನು ಮಾಡುವಂತೆ ತಿಳಿಸಿದೆ. ಇದು ಪಡಿತರ ಚೀಟಿದಾರರಿಗೆ ಕೊನೆಯದಾಗಿ ತಿಳುವಳಿಕೆ ನೀಡುವುದಾಗಿದ್ದು ಆ.31 ರ ನಂತರ ಇ-ಕೆವೈಸಿ ಬಾಕಿಯಾಗಿರುವ ಪಡಿತರ ಚೀಟಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಇದುವರೆಗೆ ಇ-ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ತಮ್ಮ ವಾಸ್ತವ್ಯಕ್ಕೆ ಸಮೀಪದ ನ್ಯಾಯಬೆಲೆ ಅಂಗಡಿಗಳಲ್ಲಿ ಕೂಡಲೇ ಇ-ಕೆವೈಸಿ ಮಾಡಿಸಿ ಕೊಳ್ಳಬೇಕು.

ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಇ-ಕೆವೈಸಿ ಮಾಡಿಸಿ ಕೊಳ್ಳಲು ಅವಕಾಶವಿದೆ. ಪಡಿತರಚೀಟಿದಾರರ ಎಲ್ಲಾ ಸದಸ್ಯರ ಬಯೋದೃಢೀಕರಣ ಮಾಡಿಸಬೇಕು. ವಿಶೇಷ ವರ್ಗಕ್ಕೆ ಸೇರಿದವರಾಗಿದ್ದಲ್ಲಿ ಆ ಬಗ್ಗೆ ದೃಢಪತ್ರ,ಆಧಾರ್ ಸಂಖ್ಯೆ, ಫೋನ್ ನಂಬರ್, ಅಡುಗೆ ಅನಿಲದ ಮಾಹಿತಿ ಹಾಗೂ ಕುಟುಂಬದ ಸದಸ್ಯರ ಸಂಬಂಧವನ್ನು ಸಹ ಇ-ಕೆವೈಸಿಯಲ್ಲಿ ನಮೂದಿಸಬೇಕು. ಇದು ಜಿಲ್ಲೆಯ ಹಾಗೂ ಪರ ಜಿಲ್ಲೆಯ ಪಡಿತರ ಚೀಟಿದಾರರಿಗೆ ಅಂತಿಮ ಅವಕಾಶವಾಗಿದ್ದು, ಇ-ಕೆವೈಸಿ ಮಾಡಿಸಿ ಕೊಳ್ಳದ ಪಡಿತರ ಚೀಟಿದಾರರಿಗೆ ಪಡಿತರ ವಿತರಣೆ ರದ್ದಾಗಬಹುದು. ಪಡಿತರ ಚೀಟಿಗಳಲ್ಲಿ ಭಾಗಶ: ಜೀವಮಾನ ನೀಡಲ್ಪಟ್ಟು ಬಾಕಿ ಉಳಿದಿರುವ ಸದಸ್ಯರು ಕೂಡಾ ಈ ತಿಂಗಳ ಅಂತ್ಯದವರೆಗೆ ಕಾಯದೇ ಕೂಡಲೇ ಇ-ಕೆವೈಸಿ ಮಾಡಿಸಿ ಕೊಂಡು ಪಡಿತರ ಚೀಟಿಯನ್ನು ಊರ್ಜಿತವಾಗಿರಿಸಿಕೊಳ್ಳಬಹುದಾಗಿರುತ್ತದೆ

Related posts

ಶ್ರೀ. ಕ್ಷೆ. ಧ. ಗ್ರಾ ಯೋಜನೆಯ ಬಜಿರೆ ಒಕ್ಕೂಟದ ಪದಗ್ರಹಣ ಹಾಗೂ 19ನೇ ವರ್ಷದ ಶನೇಶ್ವರ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’

Suddi Udaya

ಎಸ್‌.ಐ.ಟಿ ಕಾರ್ಯಾಚರಣೆಯ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ: ವಕೀಲ ಮಂಜುನಾಥ ಎನ್. ರವರ ವಿರುದ್ಧ ದೂರು ದಾಖಲು

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನ ಪಡೆದ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್

Suddi Udaya
error: Content is protected !!