23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆ.21, 22 ರಂದು ಎರಡು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹಮ್ಮಿಕೊಂಡಿದ್ದ ಜೇನು ಕೃಷಿ ಕುರಿತು ತರಬೇತಿಯಲ್ಲಿ ಆ.22 ರಂದು ಶ್ಯಾಮ್ ಸುಂದರ ಭಟ್ ಆಲಡ್ಕ ಬೆಳ್ತಂಗಡಿ ಇವರ “ಮಧುಮಕ್ಷಿಕ” ಎಂಬ ಹೆಸರಿನ ಜೇನು ಸಾಕಾಣಿಕಾ, ಸಂಸ್ಕರಣಾ ಘಟಕಕ್ಕೆ ಭೇಟಿ ಕೈಗೊಳ್ಳಲಾಯಿತು.

ಇವರು ತುಡುವೆ ಜೇನು, ನಸರಿ ಜೇನು ಮಾರಾಟದ ಜೊತೆಗೆ ಜೇನಿನ ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದು ಯುವ ಜೇನು ಕೃಷಿಕರಿಗೆ ಮಾದರಿ ಆಗಿದ್ದಲ್ಲದೆ ಅನೇಕ ತರಬೇತಿಯನ್ನು ನೀಡಿದ್ದಾರೆ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುತ್ತಾರೆ. ಇವರ ಜೇನಿನ ಮೌಲ್ಯ ವರ್ಧಿತ ಉತ್ಪನ್ನಗಳೆಂದರೆ ಜೇನುತುಪ್ಪದಿಂದ ತಯಾರಿಸಿದ ಲೇಹ್ಯ (ಮಧು ಕಲ್ಪ) ಸಿರಪ್ (ಮಧುಸಾರ), ಶರಬತ್ (ಮಧುಪೇಯರಸ), ಜೇನು, ನೆಲ್ಲಿಕಾಯಿ ಮತ್ತು ಬೆಲ್ಲ ಹಾಕಿ ಮಾಡಿರುವ ಎರಡು ರೀತಿಯ ಚಟ್ ಪಟ್ ಕ್ಯಾಂಡಿ, ಜೇನು ಮೇಣದ ಸೌಂದರ್ಯ ವರ್ಧಕ ಕ್ರೀಮ್ ಇತ್ಯಾದಿ. ಆಸಕ್ತರು ಅವರ ಜಾಲತಾಣ https://madhumakshika.com/ ಕೇ ಭೇಟಿ ನೀಡಬಹುದು.

ಪ್ರಭಾಕರ ಮಯ್ಯ ಪ್ರಗತಿಪರ ಕೃಷಿಕರು ಸುರ್ಯ, ನಡ ಗ್ರಾಮ ಬೆಳ್ತಂಗಡಿ ತಾ. ಇವರು ಪ್ರಾತ್ಯಕ್ಷಿಕೆ ವೇಳೆ ರೈತರಿಗೆ ಮಾಹಿತಿ ನೀಡಿದರು. ಹಾಗೂ ಬೆಳಿಗ್ಗಿನ ಅವಧಿಯಲ್ಲಿ ಮಲ್ಲಿಗೆ ಕೃಷಿ ಕುರಿತು ತರಬೇತಿ ನೀಡಿದರು. ಕೃಷಿ ಅಧಿಕಾರಿ ಗಣೇಶ್ ತರಬೇತಿಯನ್ನು ಆಯೋಜಿಸಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

Suddi Udaya

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

Suddi Udaya

ಐಸಮ್ಮರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಗುರುವಾಯನಕೆರೆ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್, ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ರಕ್ಷಿತ್ ಅಂಡಿಂಜೆ ಆಯ್ಕೆ

Suddi Udaya

ವೇಣೂರು: ಪೆರ್ಮುಡದಲ್ಲಿ 31ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

Suddi Udaya
error: Content is protected !!