22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆ.21, 22 ರಂದು ಎರಡು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹಮ್ಮಿಕೊಂಡಿದ್ದ ಜೇನು ಕೃಷಿ ಕುರಿತು ತರಬೇತಿಯಲ್ಲಿ ಆ.22 ರಂದು ಶ್ಯಾಮ್ ಸುಂದರ ಭಟ್ ಆಲಡ್ಕ ಬೆಳ್ತಂಗಡಿ ಇವರ “ಮಧುಮಕ್ಷಿಕ” ಎಂಬ ಹೆಸರಿನ ಜೇನು ಸಾಕಾಣಿಕಾ, ಸಂಸ್ಕರಣಾ ಘಟಕಕ್ಕೆ ಭೇಟಿ ಕೈಗೊಳ್ಳಲಾಯಿತು.

ಇವರು ತುಡುವೆ ಜೇನು, ನಸರಿ ಜೇನು ಮಾರಾಟದ ಜೊತೆಗೆ ಜೇನಿನ ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದು ಯುವ ಜೇನು ಕೃಷಿಕರಿಗೆ ಮಾದರಿ ಆಗಿದ್ದಲ್ಲದೆ ಅನೇಕ ತರಬೇತಿಯನ್ನು ನೀಡಿದ್ದಾರೆ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುತ್ತಾರೆ. ಇವರ ಜೇನಿನ ಮೌಲ್ಯ ವರ್ಧಿತ ಉತ್ಪನ್ನಗಳೆಂದರೆ ಜೇನುತುಪ್ಪದಿಂದ ತಯಾರಿಸಿದ ಲೇಹ್ಯ (ಮಧು ಕಲ್ಪ) ಸಿರಪ್ (ಮಧುಸಾರ), ಶರಬತ್ (ಮಧುಪೇಯರಸ), ಜೇನು, ನೆಲ್ಲಿಕಾಯಿ ಮತ್ತು ಬೆಲ್ಲ ಹಾಕಿ ಮಾಡಿರುವ ಎರಡು ರೀತಿಯ ಚಟ್ ಪಟ್ ಕ್ಯಾಂಡಿ, ಜೇನು ಮೇಣದ ಸೌಂದರ್ಯ ವರ್ಧಕ ಕ್ರೀಮ್ ಇತ್ಯಾದಿ. ಆಸಕ್ತರು ಅವರ ಜಾಲತಾಣ https://madhumakshika.com/ ಕೇ ಭೇಟಿ ನೀಡಬಹುದು.

ಪ್ರಭಾಕರ ಮಯ್ಯ ಪ್ರಗತಿಪರ ಕೃಷಿಕರು ಸುರ್ಯ, ನಡ ಗ್ರಾಮ ಬೆಳ್ತಂಗಡಿ ತಾ. ಇವರು ಪ್ರಾತ್ಯಕ್ಷಿಕೆ ವೇಳೆ ರೈತರಿಗೆ ಮಾಹಿತಿ ನೀಡಿದರು. ಹಾಗೂ ಬೆಳಿಗ್ಗಿನ ಅವಧಿಯಲ್ಲಿ ಮಲ್ಲಿಗೆ ಕೃಷಿ ಕುರಿತು ತರಬೇತಿ ನೀಡಿದರು. ಕೃಷಿ ಅಧಿಕಾರಿ ಗಣೇಶ್ ತರಬೇತಿಯನ್ನು ಆಯೋಜಿಸಿದ್ದರು.

Related posts

‘ಹೆಚ್ಚುವರಿ ನೀರಿನ ಶುಲ್ಕದಿಂದಾಗಿ ಜನಸಾಮಾನ್ಯರಿಗೆ ಹೊರೆ’ : ನಾವೂರು ಎಸ್ ಡಿ ಪಿ ಐ ನೇತೃತ್ವದಲ್ಲಿ ಮನವಿ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಮುಂಡಾಜೆ: ಮೂಲಾರು ದರ್ಖಾಸು ನಿವಾಸಿ ಕಮಲಾ ನಾಯ್ಕ ನಿಧನ

Suddi Udaya

ಬೆಳ್ತಂಗಡಿ : ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.97.14 ಫಲಿತಾಂಶ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರನ್ನು ಗೌರವಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ

Suddi Udaya

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya
error: Content is protected !!