25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಮಡಂತ್ಯಾರು ವಲಯ ಮಚ್ಚಿನ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರು ಪ್ರಕಾಶ್ ನಾಯ್ಕ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಕಾರ್ಯಕ್ರಮ ಉದ್ಘಾಟಿಸಿ ವಿಶ್ವ ಸಂಸ್ಥೆ ಗುರುತಿಸಿದ ಆರು ಮಾರಕ ಕಾಯಿಲೆಗಳಲ್ಲಿ ಮಾದಕ ಚಟವು ಕೂಡ ಒಂದು. ಯಾವುದೇ ಚಟಗಳು ಮಿತಿ ಮೀರಿದಾಗ ಅದಕ್ಕೆ ಮನಸ್ಸು ಹೊಂದಿಕೊಳ್ಳುತ್ತದೆ .ಇಡೀ ಪ್ರಪಂಚದಲ್ಲಿ ಒಂದನೆಯ ಸೈಲೆಂಟ್ ಕಿಲ್ಲರ್ ಧೂಮಪಾನ ,ಎರಡನೆಯದ್ದು ಮದ್ಯಪಾನ ಹಾಗಾಗಿ ವಿದ್ಯಾರ್ಥಿಗಳು ಇಂಥಹ ಚಟಗಳಿಗೆ ಬಲಿಯಾಗಿ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳಬಾರದು ಕಲಿಕೆಯ ಜೊತೆಗೆ ಜೀವನದ ಪಾಠದಲ್ಲಿ ಕೂಡ ಉತ್ತೀರ್ಣರಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜನಜಾಗೃತಿ ತಾಲ್ಲೂಕಿನ ಸಮಿತಿ ಸದಸ್ಯರಾದ ಗೋಪಾಲ್ ಕೊಲಾಜೆ, ವಲಯ ಅಧ್ಯಕ್ಷ ಜಯ ಪೂಜಾರಿ, ಮಚ್ಚಿನ ಸತ್ಯ ನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಹರ್ಷ ಬಳ್ಳಮಂಜ, ಮಚ್ಚಿನ ಸೇವಾಪ್ರತಿನಿಧಿ ಪರಮೇಶ್ವರ್, ಕುದ್ರಡ್ಕ ಸೇವಾಪ್ರತಿನಿಧಿ ಶ್ರೀಮತಿ ನಂದಿನಿ, ಶಾಲಾ ಶಿಕ್ಷಕರು, ಶಾಲಾ ಮಕ್ಕಳು ಭಾಗವಹಿಸಿದ್ದರು.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ವೇಣೂರು ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರೀದಮಿಕ್ ಯೋಗಾಸನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮೇ 7 : ಜ್ಯೋತಿ ಆಸ್ಪತ್ರೆ, ಲಾಯಿಲ– ತುರ್ತು ಮತ್ತು ಅಪಘಾತ ಚಿಕಿತ್ಸಾ ಆರೈಕೆ ಘಟಕ ಉದ್ಘಾಟನೆ

Suddi Udaya

ಶಿಲ್ಪಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆ

Suddi Udaya

ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya
error: Content is protected !!