23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಮಡಂತ್ಯಾರು ವಲಯ ಮಚ್ಚಿನ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರು ಪ್ರಕಾಶ್ ನಾಯ್ಕ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಕಾರ್ಯಕ್ರಮ ಉದ್ಘಾಟಿಸಿ ವಿಶ್ವ ಸಂಸ್ಥೆ ಗುರುತಿಸಿದ ಆರು ಮಾರಕ ಕಾಯಿಲೆಗಳಲ್ಲಿ ಮಾದಕ ಚಟವು ಕೂಡ ಒಂದು. ಯಾವುದೇ ಚಟಗಳು ಮಿತಿ ಮೀರಿದಾಗ ಅದಕ್ಕೆ ಮನಸ್ಸು ಹೊಂದಿಕೊಳ್ಳುತ್ತದೆ .ಇಡೀ ಪ್ರಪಂಚದಲ್ಲಿ ಒಂದನೆಯ ಸೈಲೆಂಟ್ ಕಿಲ್ಲರ್ ಧೂಮಪಾನ ,ಎರಡನೆಯದ್ದು ಮದ್ಯಪಾನ ಹಾಗಾಗಿ ವಿದ್ಯಾರ್ಥಿಗಳು ಇಂಥಹ ಚಟಗಳಿಗೆ ಬಲಿಯಾಗಿ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳಬಾರದು ಕಲಿಕೆಯ ಜೊತೆಗೆ ಜೀವನದ ಪಾಠದಲ್ಲಿ ಕೂಡ ಉತ್ತೀರ್ಣರಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜನಜಾಗೃತಿ ತಾಲ್ಲೂಕಿನ ಸಮಿತಿ ಸದಸ್ಯರಾದ ಗೋಪಾಲ್ ಕೊಲಾಜೆ, ವಲಯ ಅಧ್ಯಕ್ಷ ಜಯ ಪೂಜಾರಿ, ಮಚ್ಚಿನ ಸತ್ಯ ನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಹರ್ಷ ಬಳ್ಳಮಂಜ, ಮಚ್ಚಿನ ಸೇವಾಪ್ರತಿನಿಧಿ ಪರಮೇಶ್ವರ್, ಕುದ್ರಡ್ಕ ಸೇವಾಪ್ರತಿನಿಧಿ ಶ್ರೀಮತಿ ನಂದಿನಿ, ಶಾಲಾ ಶಿಕ್ಷಕರು, ಶಾಲಾ ಮಕ್ಕಳು ಭಾಗವಹಿಸಿದ್ದರು.

Related posts

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ದೀಪದ ಬತ್ತಿ ತಯಾರಿ ತರಬೇತಿಯ ಸಮಾರೋಪ

Suddi Udaya

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ: ತಪ್ಪಿದ ದೊಡ್ಡ ದುರಂತ

Suddi Udaya

ಮರೋಡಿ: ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಬಳ್ಳಾಲ್ ಕಾಂಗ್ರೇಸ್ ಸೇರ್ಪಡೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಓದುವ ಸಪ್ತಾಹ

Suddi Udaya

ಎಸ್ ಪಿ ವೈ ಎಸ್ ಎಸ್ ನಿಂದ ಮಾತೃವಂದನ, ಮಾತೃಧ್ಯಾನ, ಮಾತೃ ಭೋಜನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲೋಕಾಯುಕ್ತ ಎಸ್ಪಿಯವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ

Suddi Udaya
error: Content is protected !!