30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಕೊಕ್ಕಡ ಉಪ್ಪಾರಹಳ್ಳದಲ್ಲಿ ದಿಢೀರನೆ ಎದ್ದ ಭೀಕರ ಸುಂಟರ ಗಾಳಿ: ಗಾಳಿಗೆ ಹಾರಿ ಹೋಯಿತು ಹಲವು ಮನೆಗಳ ಹಂಚು, ಶೀಟ್ -ತೋಟಗಳಲ್ಲಿ ಮುರಿದು ಬಿತ್ತು ಅಡಿಕೆ, ತೆಂಗಿನ ಮರಗಳು

ಕೊಕ್ಕಡ : ಕೊಕ್ಕಡ ಪರಿಸರದ ಉಪ್ಪಾರಹಳ್ಳದಲ್ಲಿ ಇಂದು ಎದ್ದ ಸುಳಿಗಾಳಿಗೆ ಹಲವಾರು ಅಡಿಕೆ ಮರಗಳು, ಮನೆಗಳ ಶೀಟು, ಹಂಚುಗಳು ಹಾರಿ ಹೋಗಿ ಬಹಳಷ್ಟು ಹಾನಿಯಾಗಿದೆ.

ಗೋಳಿತೊಟ್ಟು ಬಳಿಯ ಕೋಡಿಂಗೇರಿ ಪ್ರದೇಶದ ಉಪ್ಪಾರಹಳ್ಳದಲ್ಲಿ ಎದ್ದ ಸುಳಿಗಾಳಿಗೆ ಒಬ್ಬರ 120 ಅಡಿಕೆ ಮರಗಳು ಉರುಳಿ ಬಿದ್ದಿದೆ. ಕೊಕ್ಕಡ ಪ್ರದೇಶದಲ್ಲಿ ಅನೇಕರ

ಅಡಿಕೆ ತೋಟಗಳಿಗೆ ಹಾನಿಯಾಗಿದೆ. ಕೋಡಿಂಗೇರಿ ರತ್ನಾವತಿ ಕೃಷ್ಣಪ್ಪ ಗೌಡ ಅವರ ಮನೆಯ ಹಂಚು ಹಾಗೂ ಶೀಟ್ ಸಂಪೂರ್ಣ ಹಾರಿಹೋಗಿ ಹಾನಿಯಾಗಿದೆ. ಪಿಜಿನಡ್ಕ ಕಾಲೋನಿಯ ಒಂದಿಬ್ಬರ ಮನೆಯ ಶೀಟುಗಳು ಹಾರಿ ಹೋಗಿದೆ. ನಂತರ ಡೆಂಜ, ಅಗರ್ತ ಬೀಸುವ ಸಂಧರ್ಭ ಅದರ ವೇಗ ಕಡಿಮೆಯಾಗಿದೆ. ಸುಳಿಗಾಳಿಯ

ಭೀಕರತೆಯನ್ನು ಕಣ್ಣಾರೆ ಕಂಡ ಶಿವಪ್ಪ ಗೌಡರು ಹೇಳುವ ಪ್ರಕಾರ ಅವರು ಗುಡ್ಡದಲ್ಲಿರುವ ತನ್ನ ತೋಟದ ತೆಂಗಿನ ಮರಗಳಿಗೆ ಗೊಬ್ಬರ ಹಾಕುತ್ತಿದ್ದು, ಆ ಸಂಧರ್ಭ ವಿಪರೀತ

ಶಬ್ದ ಕೇಳಿದೆ. ಶಬ್ದ ಬರುವ ಕಡೆ ನೋಡಿದಾಗ ಗಿಡಗಳು ತುಂಡಾಗುವ ಶಬ್ದ ಕೇಳಿ ಬರುತ್ತಿದ್ದು ಇದು ವಿಮಾನವೇ ಬಿದ್ದಿದೆ ಎಂದು ಕೆಳಗಡೆ ಓಡಿ ಬಂದಿದ್ದಾರೆ. ಅಡಿಕೆ ಸೋಗೆಗಳು ಬಹಳಷ್ಟು ಎತ್ತರದಲ್ಲಿ ಹಾರಾಡುವುದು ಕಾಣುತ್ತಿತ್ತಂತೆ. ಘಟನಾ ಸ್ಥಳಕ್ಕೆ ಕಂದಾಯ, ಪಂಚಾಯತ್ ಅಧಿಕಾರಿಗಳು, ಗ್ರಾ. ಪಂ. ನಿಕಟ ಪೂರ್ವ ಅಧ್ಯಕ್ಷ ಯೋಗೀಶ್ ಆಲಂಬಿಲ, ಸದಸ್ಯ ಜಗದೀಶ್ ಕೆಂಪಕೋಡಿ ಭೇಟಿ ನೀಡಿದ್ದಾರೆ.

Related posts

ಉಜಿರೆ ಕಕ್ಕರೆಬೆಟ್ಟು ಮನೆ ಕೆಡವಿ, ಸೊತ್ತುಗಳನ್ನು ಹೊರಗೆ ಎಸೆದ ಪ್ರಕರಣ: ಆರೋಪಿ ವಿರುದ್ಧ ಕೇಸು ದಾಖಲು

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಶ್ರೀ ಧ. ಮಂ. ಪಾಲಿಟೆಕ್ನಿಕ್ ರಾಷ್ಟೀಯ ಸೇವಾ ಯೋಜನೆ ಘಟಕ , ಯುವ ರೆಡ್ ಕ್ರಾಸ್ ಘಟಕ, ರೋಟರಿ ಕ್ಲಬ್ ಬೆಳ್ತಂಗಡಿ ಸಹ ಭಾಗಿತ್ವದಲ್ಲಿ ಯುವ ಜನತೆ ಮತ್ತು ಆರೋಗ್ಯದ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್ ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಪ್ರೌಢಶಾಲಾ ಪ್ರತಿಭಾ ಕಾರಂಜಿಯಲ್ಲಿ ಹಲವು ಪ್ರಶಸ್ತಿಗಳು

Suddi Udaya

ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya
error: Content is protected !!