30.7 C
ಪುತ್ತೂರು, ಬೆಳ್ತಂಗಡಿ
April 24, 2026
ಸಂಘ-ಸಂಸ್ಥೆಗಳು

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ (ನಿ.), ಬೆಳ್ತಂಗಡಿ ದ.ಕ. ಇದರ ಮಹಾಸಭೆ

ಬೆಳ್ತಂಗಡಿ :ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ (ನಿ.), ಬೆಳ್ತಂಗಡಿ ದ.ಕ. ಇದರ 2024 -25 ಸಾಲಿನ ಮಹಾಸಭೆಯು ಅಧ್ಯಕ್ಷರಾದ ಡಾ. ಕೆ. ಜಯಕೀರ್ತಿ ಜೈನ್ ಇವರ ಅಧ್ಯಕ್ಷತೆಯಲ್ಲಿ ರಾಜ್ಯ ಸರಕಾರಿ ನೌಕರರ ಸಂಘದ ಕಟ್ಟಡ, ಬೆಳ್ತಂಗಡಿಯಲ್ಲಿ ಆ. 26 ರಂದು ನಡೆಯಿತು ಅಧ್ಯಕ್ಷತೆ ವಹಿಸಿದ ಶ್ರೀ ಡಾ. ಕೆ. ಜಯಕೀರ್ತಿ ಜೈನ್ ಕಳೆದ 15 ವರ್ಷಗಳಲ್ಲಿ ಸಹಕಾರಿ ಸಂಘವು ಬೆಳೆದು ಬಂದ ದಾರಿಯನ್ನು ಸಭೆಗೆ ತಿಳಿಸಿದರು. ಮತ್ತು ಸದಸ್ಯರಿಗೆ
20% ಡಿವಿಡೆಂಟ್ ಘೋಷಿಸಿದರು
ನಿರ್ದೇಶಕರು ಹಾಗೂ ಸದಸ್ಯರು ಭಾಗವಹಿಸಿದ್ದು 2023-24ನೇ ಸಾಲಿನ ವಾರ್ಷಿಕ ವರದಿ/ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ಅಂಗೀಕರಿಸಲಾಯಿತು.

ಕಳೆದ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸದಸ್ಯರ ಮಕ್ಕಳಿಗೆ ವಿಶೇಷ ಪ್ರೋತ್ಸಾಹಕ ನಿಧಿಯೊಂದಿಗೆ ಅಭಿನಂದಿಸಲಾಯಿತು. ಕ್ಲಪ್ತ ಸಮಯದಲ್ಲಿ ಸಾಲ ಮರುಪಾವತಿಸಿದ ಸಾಲಗಾರರನ್ನು ಗುರುತಿಸಿ ಅಭಿನಂದಿಸಲಾಯಿತು.
ಉಪಾಧ್ಯಕ್ಷರಾದ ಶ್ರೀ ಚಿದಾನಂದ ಹೂಗಾರ್ ಸ್ವಾಗತಿಸಿ ನಿರ್ದೇಶಕರಾದ ಶ್ರೀ ಕೆ ಚಂದ್ರಶೇಖರ ರವರು ಧನ್ಯವಾದವಿತ್ತರು. ಸಲಹೆಗಾರರಾದ ಶ್ರೀ ವಸಂತ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಸನ್ಮಾನ ಕಾರ್ಯಕ್ರಮವನ್ನು ಶ್ರೀ ಧರಣೇಂದ್ರ ಕೆ ಜೈನ್ ನಿರ್ವಹಿಸಿದರು.

ನಿರ್ದೇಶಕರಾದ ಶ್ರೀ ಕೆ. ಚಂದ್ರಶೇಖರ, ಅಬ್ದುಲ್ ರಝಾಕ್, ಆರತಿ ಜೈನ್, ಪ್ರಶಾಂತ್ ಕುಮಾರ್, ಹೇಮಲತಾ, ವಾರಿಜ ಕೆ. ಜಯರಾಜ್ ಜೈನ್, ಹರಿಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವತ್ಸಲಾ ಜ್ಯೋತಿರಾಜ್, ಕೊಕ್ಕಡ ಶಾಖಾಧಿಕಾರಿ ಶ್ರೀ ಪಿ ಅತಿಶಯ್ ಚೈನ್, ಸಿಬ್ಬಂದಿ ವಿಶಾಲ ಹಾಗೂ ಎಲ್ಲಾ ಪಿಗ್ಗಿ ಸಂಗ್ರಾಹಕರು ಉಪಸ್ಥಿತರಿದ್ದರು

.

Related posts

ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ:ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ – ಶೇ 20 ಡಿವಿಡೆಂಟ್ ಘೋಷಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್: ಅತ್ಯುತ್ತಮ ವಲಯ ಪ್ರಶಸ್ತಿಯಲ್ಲಿ ಬೆಳ್ತಂಗಡಿ ವಲಯ ತೃತೀಯ ಸ್ಥಾನ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯಿಂದ ಆಟಿಕೂಟ ಆಚರಣೆ

Suddi Udaya

ಮಹಿಳಾ ವೃಂದ ಬೆಳ್ತಂಗಡಿ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಡೆಂಗ್ಯೂ ಜ್ವರದ ಮಾಹಿತಿ ಮತ್ತು ಜಾಗೃತಿ ಹಾಗೂ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮ

Suddi Udaya
error: Content is protected !!