September 6, 2026
ಸಂಘ-ಸಂಸ್ಥೆಗಳು

ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ:ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ – ಶೇ 20 ಡಿವಿಡೆಂಟ್ ಘೋಷಣೆ

ಬೆಳ್ತಂಗಡಿ: ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆಯು ಅಧ್ಯಕ್ಷರಾದ ಡಾ. ಕೆ. ಜಯಕೀರ್ತಿ ಜೈನ್ ಇವರ ಅಧ್ಯಕ್ಷತೆಯಲ್ಲಿ ಆ.25ರಂದು ಸುವರ್ಣ ಆಕೇ೯ಡ್ ಸಭಾಂಗಣದಲ್ಲಿ ನಡೆಯಿತು.
2023-24ನೇ ಸಾಲಿನ ವಾರ್ಷಿಕ ವರದಿ, ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ಅಂಗೀಕರಿಸಲಾಯಿತು.

ಕಳೆದ ಸಾಲಿನಲ್ಲಿಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸದಸ್ಯರ ಮಕ್ಕಳಿಗೆ ವಿಶೇಷ ಪ್ರೋತ್ಸಾಹಕ ನಿಧಿಯೊಂದಿಗೆ ಅಭಿನಂದಿಸಲಾಯಿತು. ಕ್ಲಪ್ತ ಸಮಯದಲ್ಲಿ ಸಾಲ ಮರುಪಾವತಿಸಿದ ಸಾಲಗಾರರನ್ನು ಗುರುತಿಸಿ ಅಭಿನಂದಿಸಲಾಯಿತು.

ಅಧ್ಯಕ್ಷತೆ ವಹಿಸಿದ ಡಾ. ಕೆ. ಜಯಕೀರ್ತಿ ಜೈನ್ ಕಳೆದ 15 ವರ್ಷಗಳಲ್ಲಿ ಸಹಕಾರಿ ಸಂಘವು ಬೆಳೆದು ಬಂದ ದಾರಿಯನ್ನು ಸಭೆಗೆ ತಿಳಿಸಿದರು. ಉಪಾಧ್ಯಕ್ಷರಾದ ಚಿದಾನಂದ ಹೂಗಾ‌ರ್ ಸ್ವಾಗತಿಸಿ, ನಿರ್ದೇಶಕರಾದ ಕೆ ಚಂದ್ರಶೇಖರ ರವರು ಧನ್ಯವಾದವಿತ್ತರು. ಸಲಹೆಗಾರರಾದ ವಸಂತ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಸನ್ಮಾನ ಕಾರ್ಯಕ್ರಮವನ್ನು ಧರಣೇಂದ್ರ ಕೆ ಜೈನ್ ನಿರ್ವಹಿಸಿದರು.

ನಿರ್ದೇಶಕರಾದ ಕೆ ಚಂದ್ರಶೇಖರ, ಅಬ್ದುಲ್ ರಝಾಕ್, ಆರತಿ ಜೈನ್, ಪ್ರಶಾಂತ್ ಕುಮಾರ್, ಹೇಮಲತಾ, ವಾರಿಜ ಕೆ. ಜಯರಾಜ್ ಜೈನ್, ಹರಿಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವತ್ಸಲಾ ಜ್ಯೋತಿರಾಜ್, ಕೊಕ್ಕಡ ಶಾಖಾಧಿಕಾರಿ ಪಿ ಅತಿಶಯ್ ಜೈನ್, ಸಿಬ್ಬಂದಿ ವಿಶಾಲ ಹಾಗೂ ಎಲ್ಲಾ ಪಿಗ್ಮಿ ಸಂಗ್ರಾಹಕರು ಹಾಗೂ ಸದಸ್ಯರು ಭಾಗವಹಿಸಿದ್ದರು.

Related posts

ಶಿಶಿಲ: ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ : ರಾಷ್ಟ್ರೀಯ ರೈತರ ದಿನ ಆಚರಣೆ

Suddi Udaya

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘ ಮತ್ತು ವಿವಿಧ ಸಂಘಟನೆ ನೇತೃತ್ವದಲ್ಲಿಟೀಮ್ ಈಶ್ವರ ಮಲ್ಪೆ ಸಹಯೋಗದಲ್ಲಿ ಉಚಿತ ಕಿವಿಯ ಶ್ರವಣ ತಪಾಸಣಾ ಶಿಬಿರ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ(ದುಗ್ಗಪ್ಪ) ಸೇವಾ ನಿವೃತ್ತಿ

Suddi Udaya

ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದಿಂದ ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!