ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

Suddi Udaya

ಬೆಳ್ತಂಗಡಿ : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ (83) ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ಅವರನ್ನು ಕೊಲೆ ಮಾಡಿದ ಆರೋಪಿಗಳಾದ ಆಳಿಯ ರಾಘವೇಂದ್ರ ಕೆಧಿಲಾಯ( 53) ಮತ್ತು ಮೊಮ್ಮಗ ಮುರುಳಿಕೃಷ್ಣ (21) ಅವರನ್ನು ಧರ್ಮಸ್ಥಳ ಪೊಲೀಸರು ಆ.24 ರಂದು ರಾತ್ರಿ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು ನ್ಯಾಯಾಧೀಶರು ನ್ಯಾಯಂಗ ಬಂಧನ ವಿಧಿಸಿದ್ದಾರೆ.

ಧರ್ಮಸ್ಥಳ ಪೊಲೀಸರು ಆರೋಪಿಗಳಿಬ್ಬರನ್ನು ಆ.24 ರಂದು ರಾತ್ರಿ ಮಂಗಳೂರು ಸಬ್ ಜೈಲಿಗೆ ಕಳುಹಿಸಿದ್ದು. ಆ.27 ರಂದು ಮತ್ತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಹೆಚ್ಚಿನ ವಿಚಾರಣೆಗೆ ಪಡೆಯಲಿದ್ದಾರೆ ಎಂದು ಪೊಲೀಸ್ ಮೂಲಗಳು ಮಹಾ ಎಕ್ಸ್ ಪ್ರೆಸ್ ವೆಬ್ ಸೈಟ್ ಗೆ ತಿಳಿಸಿದ್ದಾರೆ.

Leave a Comment

error: Content is protected !!