32.9 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿ

ಕೊಕ್ಕಡ ಉಪ್ಪಾರಹಳ್ಳದಲ್ಲಿ ದಿಢೀರನೆ ಎದ್ದ ಭೀಕರ ಸುಂಟರ ಗಾಳಿ: ಗಾಳಿಗೆ ಹಾರಿ ಹೋಯಿತು ಹಲವು ಮನೆಗಳ ಹಂಚು, ಶೀಟ್ -ತೋಟಗಳಲ್ಲಿ ಮುರಿದು ಬಿತ್ತು ಅಡಿಕೆ, ತೆಂಗಿನ ಮರಗಳು

ಕೊಕ್ಕಡ : ಕೊಕ್ಕಡ ಪರಿಸರದ ಉಪ್ಪಾರಹಳ್ಳದಲ್ಲಿ ಇಂದು ಎದ್ದ ಸುಳಿಗಾಳಿಗೆ ಹಲವಾರು ಅಡಿಕೆ ಮರಗಳು, ಮನೆಗಳ ಶೀಟು, ಹಂಚುಗಳು ಹಾರಿ ಹೋಗಿ ಬಹಳಷ್ಟು ಹಾನಿಯಾಗಿದೆ.

ಗೋಳಿತೊಟ್ಟು ಬಳಿಯ ಕೋಡಿಂಗೇರಿ ಪ್ರದೇಶದ ಉಪ್ಪಾರಹಳ್ಳದಲ್ಲಿ ಎದ್ದ ಸುಳಿಗಾಳಿಗೆ ಒಬ್ಬರ 120 ಅಡಿಕೆ ಮರಗಳು ಉರುಳಿ ಬಿದ್ದಿದೆ. ಕೊಕ್ಕಡ ಪ್ರದೇಶದಲ್ಲಿ ಅನೇಕರ

ಅಡಿಕೆ ತೋಟಗಳಿಗೆ ಹಾನಿಯಾಗಿದೆ. ಕೋಡಿಂಗೇರಿ ರತ್ನಾವತಿ ಕೃಷ್ಣಪ್ಪ ಗೌಡ ಅವರ ಮನೆಯ ಹಂಚು ಹಾಗೂ ಶೀಟ್ ಸಂಪೂರ್ಣ ಹಾರಿಹೋಗಿ ಹಾನಿಯಾಗಿದೆ. ಪಿಜಿನಡ್ಕ ಕಾಲೋನಿಯ ಒಂದಿಬ್ಬರ ಮನೆಯ ಶೀಟುಗಳು ಹಾರಿ ಹೋಗಿದೆ. ನಂತರ ಡೆಂಜ, ಅಗರ್ತ ಬೀಸುವ ಸಂಧರ್ಭ ಅದರ ವೇಗ ಕಡಿಮೆಯಾಗಿದೆ. ಸುಳಿಗಾಳಿಯ

ಭೀಕರತೆಯನ್ನು ಕಣ್ಣಾರೆ ಕಂಡ ಶಿವಪ್ಪ ಗೌಡರು ಹೇಳುವ ಪ್ರಕಾರ ಅವರು ಗುಡ್ಡದಲ್ಲಿರುವ ತನ್ನ ತೋಟದ ತೆಂಗಿನ ಮರಗಳಿಗೆ ಗೊಬ್ಬರ ಹಾಕುತ್ತಿದ್ದು, ಆ ಸಂಧರ್ಭ ವಿಪರೀತ

ಶಬ್ದ ಕೇಳಿದೆ. ಶಬ್ದ ಬರುವ ಕಡೆ ನೋಡಿದಾಗ ಗಿಡಗಳು ತುಂಡಾಗುವ ಶಬ್ದ ಕೇಳಿ ಬರುತ್ತಿದ್ದು ಇದು ವಿಮಾನವೇ ಬಿದ್ದಿದೆ ಎಂದು ಕೆಳಗಡೆ ಓಡಿ ಬಂದಿದ್ದಾರೆ. ಅಡಿಕೆ ಸೋಗೆಗಳು ಬಹಳಷ್ಟು ಎತ್ತರದಲ್ಲಿ ಹಾರಾಡುವುದು ಕಾಣುತ್ತಿತ್ತಂತೆ. ಘಟನಾ ಸ್ಥಳಕ್ಕೆ ಕಂದಾಯ, ಪಂಚಾಯತ್ ಅಧಿಕಾರಿಗಳು, ಗ್ರಾ. ಪಂ. ನಿಕಟ ಪೂರ್ವ ಅಧ್ಯಕ್ಷ ಯೋಗೀಶ್ ಆಲಂಬಿಲ, ಸದಸ್ಯ ಜಗದೀಶ್ ಕೆಂಪಕೋಡಿ ಭೇಟಿ ನೀಡಿದ್ದಾರೆ.

Related posts

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಅವ್ಯವಸ್ಥೆ ಪರಿಶೀಲಿಸಿದ ಎ.ಸಿ: ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಡಲು ಗುತ್ತಿಗೆದಾರರಿಗೆ ಸೂಚನೆ

Suddi Udaya

ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಗಾರ

Suddi Udaya

ಬಂಗೇರರು ನಡೆದ ದಾರಿಯಲ್ಲಿ ನಾವೆಲ್ಲರೂ ಸಾಗುವ ಮೂಲಕ ಅವರಿಗೆ ನಿಜವಾದ ಶ್ರದ್ದಾಂಜಲಿ ಸಲ್ಲಿಸೋಣ……

Suddi Udaya

ಬೆಳ್ತಂಗಡಿ: ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಸತೀಶ್ ಕಾಶಿಪಟ್ಣ, ಪ್ರವೀಣ್ ಗಿಲ್ಬರ್ಟ್ ಪಿಂಟೋ ಆಯ್ಕೆ

Suddi Udaya
error: Content is protected !!