22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಕೊಕ್ಕಡ ಉಪ್ಪಾರಹಳ್ಳದಲ್ಲಿ ದಿಢೀರನೆ ಎದ್ದ ಭೀಕರ ಸುಂಟರ ಗಾಳಿ: ಗಾಳಿಗೆ ಹಾರಿ ಹೋಯಿತು ಹಲವು ಮನೆಗಳ ಹಂಚು, ಶೀಟ್ -ತೋಟಗಳಲ್ಲಿ ಮುರಿದು ಬಿತ್ತು ಅಡಿಕೆ, ತೆಂಗಿನ ಮರಗಳು

ಕೊಕ್ಕಡ : ಕೊಕ್ಕಡ ಪರಿಸರದ ಉಪ್ಪಾರಹಳ್ಳದಲ್ಲಿ ಇಂದು ಎದ್ದ ಸುಳಿಗಾಳಿಗೆ ಹಲವಾರು ಅಡಿಕೆ ಮರಗಳು, ಮನೆಗಳ ಶೀಟು, ಹಂಚುಗಳು ಹಾರಿ ಹೋಗಿ ಬಹಳಷ್ಟು ಹಾನಿಯಾಗಿದೆ.

ಗೋಳಿತೊಟ್ಟು ಬಳಿಯ ಕೋಡಿಂಗೇರಿ ಪ್ರದೇಶದ ಉಪ್ಪಾರಹಳ್ಳದಲ್ಲಿ ಎದ್ದ ಸುಳಿಗಾಳಿಗೆ ಒಬ್ಬರ 120 ಅಡಿಕೆ ಮರಗಳು ಉರುಳಿ ಬಿದ್ದಿದೆ. ಕೊಕ್ಕಡ ಪ್ರದೇಶದಲ್ಲಿ ಅನೇಕರ

ಅಡಿಕೆ ತೋಟಗಳಿಗೆ ಹಾನಿಯಾಗಿದೆ. ಕೋಡಿಂಗೇರಿ ರತ್ನಾವತಿ ಕೃಷ್ಣಪ್ಪ ಗೌಡ ಅವರ ಮನೆಯ ಹಂಚು ಹಾಗೂ ಶೀಟ್ ಸಂಪೂರ್ಣ ಹಾರಿಹೋಗಿ ಹಾನಿಯಾಗಿದೆ. ಪಿಜಿನಡ್ಕ ಕಾಲೋನಿಯ ಒಂದಿಬ್ಬರ ಮನೆಯ ಶೀಟುಗಳು ಹಾರಿ ಹೋಗಿದೆ. ನಂತರ ಡೆಂಜ, ಅಗರ್ತ ಬೀಸುವ ಸಂಧರ್ಭ ಅದರ ವೇಗ ಕಡಿಮೆಯಾಗಿದೆ. ಸುಳಿಗಾಳಿಯ

ಭೀಕರತೆಯನ್ನು ಕಣ್ಣಾರೆ ಕಂಡ ಶಿವಪ್ಪ ಗೌಡರು ಹೇಳುವ ಪ್ರಕಾರ ಅವರು ಗುಡ್ಡದಲ್ಲಿರುವ ತನ್ನ ತೋಟದ ತೆಂಗಿನ ಮರಗಳಿಗೆ ಗೊಬ್ಬರ ಹಾಕುತ್ತಿದ್ದು, ಆ ಸಂಧರ್ಭ ವಿಪರೀತ

ಶಬ್ದ ಕೇಳಿದೆ. ಶಬ್ದ ಬರುವ ಕಡೆ ನೋಡಿದಾಗ ಗಿಡಗಳು ತುಂಡಾಗುವ ಶಬ್ದ ಕೇಳಿ ಬರುತ್ತಿದ್ದು ಇದು ವಿಮಾನವೇ ಬಿದ್ದಿದೆ ಎಂದು ಕೆಳಗಡೆ ಓಡಿ ಬಂದಿದ್ದಾರೆ. ಅಡಿಕೆ ಸೋಗೆಗಳು ಬಹಳಷ್ಟು ಎತ್ತರದಲ್ಲಿ ಹಾರಾಡುವುದು ಕಾಣುತ್ತಿತ್ತಂತೆ. ಘಟನಾ ಸ್ಥಳಕ್ಕೆ ಕಂದಾಯ, ಪಂಚಾಯತ್ ಅಧಿಕಾರಿಗಳು, ಗ್ರಾ. ಪಂ. ನಿಕಟ ಪೂರ್ವ ಅಧ್ಯಕ್ಷ ಯೋಗೀಶ್ ಆಲಂಬಿಲ, ಸದಸ್ಯ ಜಗದೀಶ್ ಕೆಂಪಕೋಡಿ ಭೇಟಿ ನೀಡಿದ್ದಾರೆ.

Related posts

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಕುಕ್ಕಳದ ಶ್ರೇಯಸ್ ಪೂಜಾರಿ ಆಯ್ಕೆ

Suddi Udaya

ಬಜಿರೆ: ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ-ಧಾರ್ಮಿಕ ಸಭೆ

Suddi Udaya

ಗುರುವಾಯನಕೆರೆ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ನ.29: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನೆರಿಯ, ಪುದುವೆಟ್ಟು, ಮುಂಡಾಜೆ, ಕಲ್ಮಂಜದಲ್ಲಿ ಜನಸ್ಪಂದನಾ ಸಭೆ

Suddi Udaya

ಪುತ್ರಬೈಲು ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ದಿಮ್ಮಿಗಳ ತೆರವು ಕಾರ್ಯ

Suddi Udaya
error: Content is protected !!