23.7 C
ಪುತ್ತೂರು, ಬೆಳ್ತಂಗಡಿ
April 24, 2026
ಸಂಘ-ಸಂಸ್ಥೆಗಳು

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ (ನಿ.), ಬೆಳ್ತಂಗಡಿ ದ.ಕ. ಇದರ ಮಹಾಸಭೆ

ಬೆಳ್ತಂಗಡಿ :ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ (ನಿ.), ಬೆಳ್ತಂಗಡಿ ದ.ಕ. ಇದರ 2024 -25 ಸಾಲಿನ ಮಹಾಸಭೆಯು ಅಧ್ಯಕ್ಷರಾದ ಡಾ. ಕೆ. ಜಯಕೀರ್ತಿ ಜೈನ್ ಇವರ ಅಧ್ಯಕ್ಷತೆಯಲ್ಲಿ ರಾಜ್ಯ ಸರಕಾರಿ ನೌಕರರ ಸಂಘದ ಕಟ್ಟಡ, ಬೆಳ್ತಂಗಡಿಯಲ್ಲಿ ಆ. 26 ರಂದು ನಡೆಯಿತು ಅಧ್ಯಕ್ಷತೆ ವಹಿಸಿದ ಶ್ರೀ ಡಾ. ಕೆ. ಜಯಕೀರ್ತಿ ಜೈನ್ ಕಳೆದ 15 ವರ್ಷಗಳಲ್ಲಿ ಸಹಕಾರಿ ಸಂಘವು ಬೆಳೆದು ಬಂದ ದಾರಿಯನ್ನು ಸಭೆಗೆ ತಿಳಿಸಿದರು. ಮತ್ತು ಸದಸ್ಯರಿಗೆ
20% ಡಿವಿಡೆಂಟ್ ಘೋಷಿಸಿದರು
ನಿರ್ದೇಶಕರು ಹಾಗೂ ಸದಸ್ಯರು ಭಾಗವಹಿಸಿದ್ದು 2023-24ನೇ ಸಾಲಿನ ವಾರ್ಷಿಕ ವರದಿ/ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ಅಂಗೀಕರಿಸಲಾಯಿತು.

ಕಳೆದ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸದಸ್ಯರ ಮಕ್ಕಳಿಗೆ ವಿಶೇಷ ಪ್ರೋತ್ಸಾಹಕ ನಿಧಿಯೊಂದಿಗೆ ಅಭಿನಂದಿಸಲಾಯಿತು. ಕ್ಲಪ್ತ ಸಮಯದಲ್ಲಿ ಸಾಲ ಮರುಪಾವತಿಸಿದ ಸಾಲಗಾರರನ್ನು ಗುರುತಿಸಿ ಅಭಿನಂದಿಸಲಾಯಿತು.
ಉಪಾಧ್ಯಕ್ಷರಾದ ಶ್ರೀ ಚಿದಾನಂದ ಹೂಗಾರ್ ಸ್ವಾಗತಿಸಿ ನಿರ್ದೇಶಕರಾದ ಶ್ರೀ ಕೆ ಚಂದ್ರಶೇಖರ ರವರು ಧನ್ಯವಾದವಿತ್ತರು. ಸಲಹೆಗಾರರಾದ ಶ್ರೀ ವಸಂತ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಸನ್ಮಾನ ಕಾರ್ಯಕ್ರಮವನ್ನು ಶ್ರೀ ಧರಣೇಂದ್ರ ಕೆ ಜೈನ್ ನಿರ್ವಹಿಸಿದರು.

ನಿರ್ದೇಶಕರಾದ ಶ್ರೀ ಕೆ. ಚಂದ್ರಶೇಖರ, ಅಬ್ದುಲ್ ರಝಾಕ್, ಆರತಿ ಜೈನ್, ಪ್ರಶಾಂತ್ ಕುಮಾರ್, ಹೇಮಲತಾ, ವಾರಿಜ ಕೆ. ಜಯರಾಜ್ ಜೈನ್, ಹರಿಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವತ್ಸಲಾ ಜ್ಯೋತಿರಾಜ್, ಕೊಕ್ಕಡ ಶಾಖಾಧಿಕಾರಿ ಶ್ರೀ ಪಿ ಅತಿಶಯ್ ಚೈನ್, ಸಿಬ್ಬಂದಿ ವಿಶಾಲ ಹಾಗೂ ಎಲ್ಲಾ ಪಿಗ್ಗಿ ಸಂಗ್ರಾಹಕರು ಉಪಸ್ಥಿತರಿದ್ದರು

.

Related posts

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲ: ಅಧ್ಯಕ್ಷರಾಗಿ ಯಶೋಧರ ಬಂಗೇರ,ಪ್ರ ಕಾರ್ಯದರ್ಶಿಯಾಗಿ ಪ್ರದೀಪ್ ಕೋಟ್ಯಾನ್ ಆಯ್ಕೆ

Suddi Udaya

ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಜೆ.ಕೆ ಪೌಲ್ ರವರಿಗೆ ಶ್ರದ್ಧಾಂಜಲಿ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬೃಹತ್ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ

Suddi Udaya

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!