23.5 C
ಪುತ್ತೂರು, ಬೆಳ್ತಂಗಡಿ
March 7, 2026
ಸಂಘ-ಸಂಸ್ಥೆಗಳು

ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ:ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ – ಶೇ 20 ಡಿವಿಡೆಂಟ್ ಘೋಷಣೆ

ಬೆಳ್ತಂಗಡಿ: ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆಯು ಅಧ್ಯಕ್ಷರಾದ ಡಾ. ಕೆ. ಜಯಕೀರ್ತಿ ಜೈನ್ ಇವರ ಅಧ್ಯಕ್ಷತೆಯಲ್ಲಿ ಆ.25ರಂದು ಸುವರ್ಣ ಆಕೇ೯ಡ್ ಸಭಾಂಗಣದಲ್ಲಿ ನಡೆಯಿತು.
2023-24ನೇ ಸಾಲಿನ ವಾರ್ಷಿಕ ವರದಿ, ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ಅಂಗೀಕರಿಸಲಾಯಿತು.

ಕಳೆದ ಸಾಲಿನಲ್ಲಿಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸದಸ್ಯರ ಮಕ್ಕಳಿಗೆ ವಿಶೇಷ ಪ್ರೋತ್ಸಾಹಕ ನಿಧಿಯೊಂದಿಗೆ ಅಭಿನಂದಿಸಲಾಯಿತು. ಕ್ಲಪ್ತ ಸಮಯದಲ್ಲಿ ಸಾಲ ಮರುಪಾವತಿಸಿದ ಸಾಲಗಾರರನ್ನು ಗುರುತಿಸಿ ಅಭಿನಂದಿಸಲಾಯಿತು.

ಅಧ್ಯಕ್ಷತೆ ವಹಿಸಿದ ಡಾ. ಕೆ. ಜಯಕೀರ್ತಿ ಜೈನ್ ಕಳೆದ 15 ವರ್ಷಗಳಲ್ಲಿ ಸಹಕಾರಿ ಸಂಘವು ಬೆಳೆದು ಬಂದ ದಾರಿಯನ್ನು ಸಭೆಗೆ ತಿಳಿಸಿದರು. ಉಪಾಧ್ಯಕ್ಷರಾದ ಚಿದಾನಂದ ಹೂಗಾ‌ರ್ ಸ್ವಾಗತಿಸಿ, ನಿರ್ದೇಶಕರಾದ ಕೆ ಚಂದ್ರಶೇಖರ ರವರು ಧನ್ಯವಾದವಿತ್ತರು. ಸಲಹೆಗಾರರಾದ ವಸಂತ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಸನ್ಮಾನ ಕಾರ್ಯಕ್ರಮವನ್ನು ಧರಣೇಂದ್ರ ಕೆ ಜೈನ್ ನಿರ್ವಹಿಸಿದರು.

ನಿರ್ದೇಶಕರಾದ ಕೆ ಚಂದ್ರಶೇಖರ, ಅಬ್ದುಲ್ ರಝಾಕ್, ಆರತಿ ಜೈನ್, ಪ್ರಶಾಂತ್ ಕುಮಾರ್, ಹೇಮಲತಾ, ವಾರಿಜ ಕೆ. ಜಯರಾಜ್ ಜೈನ್, ಹರಿಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವತ್ಸಲಾ ಜ್ಯೋತಿರಾಜ್, ಕೊಕ್ಕಡ ಶಾಖಾಧಿಕಾರಿ ಪಿ ಅತಿಶಯ್ ಜೈನ್, ಸಿಬ್ಬಂದಿ ವಿಶಾಲ ಹಾಗೂ ಎಲ್ಲಾ ಪಿಗ್ಮಿ ಸಂಗ್ರಾಹಕರು ಹಾಗೂ ಸದಸ್ಯರು ಭಾಗವಹಿಸಿದ್ದರು.

Related posts

ಉಜಿರೆ: ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಜೂ.8:ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

Suddi Udaya

ಬೆಳ್ತಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ನಾಳೆ(ಅ.31): ರಾಷ್ಟ್ರೀಯ ಏಕತಾ ದಿವಸ್” ದಿನದ ಆಚರಣೆ ಪ್ರಯುಕ್ತ ಉಜಿರೆಯಲ್ಲಿ “ಏಕತಾ ಓಟ”

Suddi Udaya

ಉಜಿರೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಒಕ್ಕೂಟ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!