22.6 C
ಪುತ್ತೂರು, ಬೆಳ್ತಂಗಡಿ
July 23, 2026
ಸಂಘ-ಸಂಸ್ಥೆಗಳು

ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ:ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ – ಶೇ 20 ಡಿವಿಡೆಂಟ್ ಘೋಷಣೆ

ಬೆಳ್ತಂಗಡಿ: ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆಯು ಅಧ್ಯಕ್ಷರಾದ ಡಾ. ಕೆ. ಜಯಕೀರ್ತಿ ಜೈನ್ ಇವರ ಅಧ್ಯಕ್ಷತೆಯಲ್ಲಿ ಆ.25ರಂದು ಸುವರ್ಣ ಆಕೇ೯ಡ್ ಸಭಾಂಗಣದಲ್ಲಿ ನಡೆಯಿತು.
2023-24ನೇ ಸಾಲಿನ ವಾರ್ಷಿಕ ವರದಿ, ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ಅಂಗೀಕರಿಸಲಾಯಿತು.

ಕಳೆದ ಸಾಲಿನಲ್ಲಿಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸದಸ್ಯರ ಮಕ್ಕಳಿಗೆ ವಿಶೇಷ ಪ್ರೋತ್ಸಾಹಕ ನಿಧಿಯೊಂದಿಗೆ ಅಭಿನಂದಿಸಲಾಯಿತು. ಕ್ಲಪ್ತ ಸಮಯದಲ್ಲಿ ಸಾಲ ಮರುಪಾವತಿಸಿದ ಸಾಲಗಾರರನ್ನು ಗುರುತಿಸಿ ಅಭಿನಂದಿಸಲಾಯಿತು.

ಅಧ್ಯಕ್ಷತೆ ವಹಿಸಿದ ಡಾ. ಕೆ. ಜಯಕೀರ್ತಿ ಜೈನ್ ಕಳೆದ 15 ವರ್ಷಗಳಲ್ಲಿ ಸಹಕಾರಿ ಸಂಘವು ಬೆಳೆದು ಬಂದ ದಾರಿಯನ್ನು ಸಭೆಗೆ ತಿಳಿಸಿದರು. ಉಪಾಧ್ಯಕ್ಷರಾದ ಚಿದಾನಂದ ಹೂಗಾ‌ರ್ ಸ್ವಾಗತಿಸಿ, ನಿರ್ದೇಶಕರಾದ ಕೆ ಚಂದ್ರಶೇಖರ ರವರು ಧನ್ಯವಾದವಿತ್ತರು. ಸಲಹೆಗಾರರಾದ ವಸಂತ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಸನ್ಮಾನ ಕಾರ್ಯಕ್ರಮವನ್ನು ಧರಣೇಂದ್ರ ಕೆ ಜೈನ್ ನಿರ್ವಹಿಸಿದರು.

ನಿರ್ದೇಶಕರಾದ ಕೆ ಚಂದ್ರಶೇಖರ, ಅಬ್ದುಲ್ ರಝಾಕ್, ಆರತಿ ಜೈನ್, ಪ್ರಶಾಂತ್ ಕುಮಾರ್, ಹೇಮಲತಾ, ವಾರಿಜ ಕೆ. ಜಯರಾಜ್ ಜೈನ್, ಹರಿಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವತ್ಸಲಾ ಜ್ಯೋತಿರಾಜ್, ಕೊಕ್ಕಡ ಶಾಖಾಧಿಕಾರಿ ಪಿ ಅತಿಶಯ್ ಜೈನ್, ಸಿಬ್ಬಂದಿ ವಿಶಾಲ ಹಾಗೂ ಎಲ್ಲಾ ಪಿಗ್ಮಿ ಸಂಗ್ರಾಹಕರು ಹಾಗೂ ಸದಸ್ಯರು ಭಾಗವಹಿಸಿದ್ದರು.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ : ರಾಷ್ಟ್ರೀಯ ರೈತರ ದಿನ ಆಚರಣೆ

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಲಾಂಛನ ಬಿಡುಗಡೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳದಲ್ಲಿ ಸೀರೆಗಳ ವಿಶೇಷ ಮಳಿಗೆ “ಸುನೀಲ್ ಸಿಲ್ಕ್ ಸಾರೀಸ್” ಶುಭಾರಂಭ-ಭಾರತೀಯ ಪರಂಪರೆಯಲ್ಲಿ ಸೀರೆಗೆ ವಿಶೇಷ ಸ್ಥಾನಮಾನವಿದೆ: ಶ್ರದ್ದಾ ಅಮಿತ್-ವಿನೂತನ ಶೈಲಿಯ, ಹತ್ತಾರು ಬಗೆಯ, ಉತ್ತಮ ಕಲೆಕ್ಷನ್ ನೊಂದಿಗೆ ಸೀರೆಗಳು ಲಭ್ಯ

Suddi Udaya
error: Content is protected !!