September 6, 2026
ಸಂಘ-ಸಂಸ್ಥೆಗಳು

ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ:ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ – ಶೇ 20 ಡಿವಿಡೆಂಟ್ ಘೋಷಣೆ

ಬೆಳ್ತಂಗಡಿ: ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆಯು ಅಧ್ಯಕ್ಷರಾದ ಡಾ. ಕೆ. ಜಯಕೀರ್ತಿ ಜೈನ್ ಇವರ ಅಧ್ಯಕ್ಷತೆಯಲ್ಲಿ ಆ.25ರಂದು ಸುವರ್ಣ ಆಕೇ೯ಡ್ ಸಭಾಂಗಣದಲ್ಲಿ ನಡೆಯಿತು.
2023-24ನೇ ಸಾಲಿನ ವಾರ್ಷಿಕ ವರದಿ, ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ಅಂಗೀಕರಿಸಲಾಯಿತು.

ಕಳೆದ ಸಾಲಿನಲ್ಲಿಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸದಸ್ಯರ ಮಕ್ಕಳಿಗೆ ವಿಶೇಷ ಪ್ರೋತ್ಸಾಹಕ ನಿಧಿಯೊಂದಿಗೆ ಅಭಿನಂದಿಸಲಾಯಿತು. ಕ್ಲಪ್ತ ಸಮಯದಲ್ಲಿ ಸಾಲ ಮರುಪಾವತಿಸಿದ ಸಾಲಗಾರರನ್ನು ಗುರುತಿಸಿ ಅಭಿನಂದಿಸಲಾಯಿತು.

ಅಧ್ಯಕ್ಷತೆ ವಹಿಸಿದ ಡಾ. ಕೆ. ಜಯಕೀರ್ತಿ ಜೈನ್ ಕಳೆದ 15 ವರ್ಷಗಳಲ್ಲಿ ಸಹಕಾರಿ ಸಂಘವು ಬೆಳೆದು ಬಂದ ದಾರಿಯನ್ನು ಸಭೆಗೆ ತಿಳಿಸಿದರು. ಉಪಾಧ್ಯಕ್ಷರಾದ ಚಿದಾನಂದ ಹೂಗಾ‌ರ್ ಸ್ವಾಗತಿಸಿ, ನಿರ್ದೇಶಕರಾದ ಕೆ ಚಂದ್ರಶೇಖರ ರವರು ಧನ್ಯವಾದವಿತ್ತರು. ಸಲಹೆಗಾರರಾದ ವಸಂತ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಸನ್ಮಾನ ಕಾರ್ಯಕ್ರಮವನ್ನು ಧರಣೇಂದ್ರ ಕೆ ಜೈನ್ ನಿರ್ವಹಿಸಿದರು.

ನಿರ್ದೇಶಕರಾದ ಕೆ ಚಂದ್ರಶೇಖರ, ಅಬ್ದುಲ್ ರಝಾಕ್, ಆರತಿ ಜೈನ್, ಪ್ರಶಾಂತ್ ಕುಮಾರ್, ಹೇಮಲತಾ, ವಾರಿಜ ಕೆ. ಜಯರಾಜ್ ಜೈನ್, ಹರಿಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವತ್ಸಲಾ ಜ್ಯೋತಿರಾಜ್, ಕೊಕ್ಕಡ ಶಾಖಾಧಿಕಾರಿ ಪಿ ಅತಿಶಯ್ ಜೈನ್, ಸಿಬ್ಬಂದಿ ವಿಶಾಲ ಹಾಗೂ ಎಲ್ಲಾ ಪಿಗ್ಮಿ ಸಂಗ್ರಾಹಕರು ಹಾಗೂ ಸದಸ್ಯರು ಭಾಗವಹಿಸಿದ್ದರು.

Related posts

ಲಾಯಿಲ: ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಮಡಂತ್ಯಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವಾರ್ಷಿಕ ಸಭೆ: ನೂತನ ಅಧ್ಯಕ್ಷರಾಗಿ ಪುನೀತ್ ಕುಮಾರ್ ಆಯ್ಕೆ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ವಿಜಯ ಕುಮಾರ್, ಉಪಾಧ್ಯಕ್ಷರಾಗಿ ಕುಸುಮಾ ಅವಿರೋಧ ಆಯ್ಕೆ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿ ಸಮಾರೋಪ

Suddi Udaya

‘ಬೆಸ್ಟ್ ಎಂ.ಎಲ್.ಎ’ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸನ್ಮಾನ

Suddi Udaya

ವೇಣೂರು: ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!