ಗ್ರಾಮಾಂತರ ಸುದ್ದಿ

ಕೊಕ್ಕಡ ಉಪ್ಪಾರಹಳ್ಳದಲ್ಲಿ ದಿಢೀರನೆ ಎದ್ದ ಭೀಕರ ಸುಂಟರ ಗಾಳಿ: ಗಾಳಿಗೆ ಹಾರಿ ಹೋಯಿತು ಹಲವು ಮನೆಗಳ ಹಂಚು, ಶೀಟ್ -ತೋಟಗಳಲ್ಲಿ ಮುರಿದು ಬಿತ್ತು ಅಡಿಕೆ, ತೆಂಗಿನ ಮರಗಳು

ಕೊಕ್ಕಡ : ಕೊಕ್ಕಡ ಪರಿಸರದ ಉಪ್ಪಾರಹಳ್ಳದಲ್ಲಿ ಇಂದು ಎದ್ದ ಸುಳಿಗಾಳಿಗೆ ಹಲವಾರು ಅಡಿಕೆ ಮರಗಳು, ಮನೆಗಳ ಶೀಟು, ಹಂಚುಗಳು ಹಾರಿ ಹೋಗಿ ಬಹಳಷ್ಟು ಹಾನಿಯಾಗಿದೆ.

ಗೋಳಿತೊಟ್ಟು ಬಳಿಯ ಕೋಡಿಂಗೇರಿ ಪ್ರದೇಶದ ಉಪ್ಪಾರಹಳ್ಳದಲ್ಲಿ ಎದ್ದ ಸುಳಿಗಾಳಿಗೆ ಒಬ್ಬರ 120 ಅಡಿಕೆ ಮರಗಳು ಉರುಳಿ ಬಿದ್ದಿದೆ. ಕೊಕ್ಕಡ ಪ್ರದೇಶದಲ್ಲಿ ಅನೇಕರ

ಅಡಿಕೆ ತೋಟಗಳಿಗೆ ಹಾನಿಯಾಗಿದೆ. ಕೋಡಿಂಗೇರಿ ರತ್ನಾವತಿ ಕೃಷ್ಣಪ್ಪ ಗೌಡ ಅವರ ಮನೆಯ ಹಂಚು ಹಾಗೂ ಶೀಟ್ ಸಂಪೂರ್ಣ ಹಾರಿಹೋಗಿ ಹಾನಿಯಾಗಿದೆ. ಪಿಜಿನಡ್ಕ ಕಾಲೋನಿಯ ಒಂದಿಬ್ಬರ ಮನೆಯ ಶೀಟುಗಳು ಹಾರಿ ಹೋಗಿದೆ. ನಂತರ ಡೆಂಜ, ಅಗರ್ತ ಬೀಸುವ ಸಂಧರ್ಭ ಅದರ ವೇಗ ಕಡಿಮೆಯಾಗಿದೆ. ಸುಳಿಗಾಳಿಯ

ಭೀಕರತೆಯನ್ನು ಕಣ್ಣಾರೆ ಕಂಡ ಶಿವಪ್ಪ ಗೌಡರು ಹೇಳುವ ಪ್ರಕಾರ ಅವರು ಗುಡ್ಡದಲ್ಲಿರುವ ತನ್ನ ತೋಟದ ತೆಂಗಿನ ಮರಗಳಿಗೆ ಗೊಬ್ಬರ ಹಾಕುತ್ತಿದ್ದು, ಆ ಸಂಧರ್ಭ ವಿಪರೀತ

ಶಬ್ದ ಕೇಳಿದೆ. ಶಬ್ದ ಬರುವ ಕಡೆ ನೋಡಿದಾಗ ಗಿಡಗಳು ತುಂಡಾಗುವ ಶಬ್ದ ಕೇಳಿ ಬರುತ್ತಿದ್ದು ಇದು ವಿಮಾನವೇ ಬಿದ್ದಿದೆ ಎಂದು ಕೆಳಗಡೆ ಓಡಿ ಬಂದಿದ್ದಾರೆ. ಅಡಿಕೆ ಸೋಗೆಗಳು ಬಹಳಷ್ಟು ಎತ್ತರದಲ್ಲಿ ಹಾರಾಡುವುದು ಕಾಣುತ್ತಿತ್ತಂತೆ. ಘಟನಾ ಸ್ಥಳಕ್ಕೆ ಕಂದಾಯ, ಪಂಚಾಯತ್ ಅಧಿಕಾರಿಗಳು, ಗ್ರಾ. ಪಂ. ನಿಕಟ ಪೂರ್ವ ಅಧ್ಯಕ್ಷ ಯೋಗೀಶ್ ಆಲಂಬಿಲ, ಸದಸ್ಯ ಜಗದೀಶ್ ಕೆಂಪಕೋಡಿ ಭೇಟಿ ನೀಡಿದ್ದಾರೆ.

Related posts

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya

ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಸಂಸದರ ಮೂಲಕ ಕೇಂದ್ರ ಕೃಷಿ ಸಚಿವರಿಗೆ ರಬ್ಬರ್ ಸೊಸೈಟಿಯಿಂದ ಮನವಿ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳು

Suddi Udaya

ಮೊಗ್ರು: ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ ಇದರ ಪೋಷಕರ ಹಾಗೂ ಶಿಕ್ಷಕರ ಚಿಂತನಾ ಸಭೆ

Suddi Udaya

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಬಯಲು ; ಬೆಳ್ತಂಗಡಿ ಪೊಲೀಸರಿಂದ ದಾಳಿ: ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಗಸ್ತು ಅರಣ್ಯ ಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಪ್ರಸಾದ್ ರವರು ಪದೋನ್ನತಿಗೊಂಡು ಉಪ ವಲಯ ಅರಣ್ಯ ಅಧಿಕಾರಿಯಾಗಿ ಬಂಟ್ವಾಳ ವಲಯದ ಐಸಿಟಿ ಶಾಖೆಗೆ ವರ್ಗಾವಣೆ

Suddi Udaya
error: Content is protected !!