23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಕೊಕ್ಕಡ ಉಪ್ಪಾರಹಳ್ಳದಲ್ಲಿ ದಿಢೀರನೆ ಎದ್ದ ಭೀಕರ ಸುಂಟರ ಗಾಳಿ: ಗಾಳಿಗೆ ಹಾರಿ ಹೋಯಿತು ಹಲವು ಮನೆಗಳ ಹಂಚು, ಶೀಟ್ -ತೋಟಗಳಲ್ಲಿ ಮುರಿದು ಬಿತ್ತು ಅಡಿಕೆ, ತೆಂಗಿನ ಮರಗಳು

ಕೊಕ್ಕಡ : ಕೊಕ್ಕಡ ಪರಿಸರದ ಉಪ್ಪಾರಹಳ್ಳದಲ್ಲಿ ಇಂದು ಎದ್ದ ಸುಳಿಗಾಳಿಗೆ ಹಲವಾರು ಅಡಿಕೆ ಮರಗಳು, ಮನೆಗಳ ಶೀಟು, ಹಂಚುಗಳು ಹಾರಿ ಹೋಗಿ ಬಹಳಷ್ಟು ಹಾನಿಯಾಗಿದೆ.

ಗೋಳಿತೊಟ್ಟು ಬಳಿಯ ಕೋಡಿಂಗೇರಿ ಪ್ರದೇಶದ ಉಪ್ಪಾರಹಳ್ಳದಲ್ಲಿ ಎದ್ದ ಸುಳಿಗಾಳಿಗೆ ಒಬ್ಬರ 120 ಅಡಿಕೆ ಮರಗಳು ಉರುಳಿ ಬಿದ್ದಿದೆ. ಕೊಕ್ಕಡ ಪ್ರದೇಶದಲ್ಲಿ ಅನೇಕರ

ಅಡಿಕೆ ತೋಟಗಳಿಗೆ ಹಾನಿಯಾಗಿದೆ. ಕೋಡಿಂಗೇರಿ ರತ್ನಾವತಿ ಕೃಷ್ಣಪ್ಪ ಗೌಡ ಅವರ ಮನೆಯ ಹಂಚು ಹಾಗೂ ಶೀಟ್ ಸಂಪೂರ್ಣ ಹಾರಿಹೋಗಿ ಹಾನಿಯಾಗಿದೆ. ಪಿಜಿನಡ್ಕ ಕಾಲೋನಿಯ ಒಂದಿಬ್ಬರ ಮನೆಯ ಶೀಟುಗಳು ಹಾರಿ ಹೋಗಿದೆ. ನಂತರ ಡೆಂಜ, ಅಗರ್ತ ಬೀಸುವ ಸಂಧರ್ಭ ಅದರ ವೇಗ ಕಡಿಮೆಯಾಗಿದೆ. ಸುಳಿಗಾಳಿಯ

ಭೀಕರತೆಯನ್ನು ಕಣ್ಣಾರೆ ಕಂಡ ಶಿವಪ್ಪ ಗೌಡರು ಹೇಳುವ ಪ್ರಕಾರ ಅವರು ಗುಡ್ಡದಲ್ಲಿರುವ ತನ್ನ ತೋಟದ ತೆಂಗಿನ ಮರಗಳಿಗೆ ಗೊಬ್ಬರ ಹಾಕುತ್ತಿದ್ದು, ಆ ಸಂಧರ್ಭ ವಿಪರೀತ

ಶಬ್ದ ಕೇಳಿದೆ. ಶಬ್ದ ಬರುವ ಕಡೆ ನೋಡಿದಾಗ ಗಿಡಗಳು ತುಂಡಾಗುವ ಶಬ್ದ ಕೇಳಿ ಬರುತ್ತಿದ್ದು ಇದು ವಿಮಾನವೇ ಬಿದ್ದಿದೆ ಎಂದು ಕೆಳಗಡೆ ಓಡಿ ಬಂದಿದ್ದಾರೆ. ಅಡಿಕೆ ಸೋಗೆಗಳು ಬಹಳಷ್ಟು ಎತ್ತರದಲ್ಲಿ ಹಾರಾಡುವುದು ಕಾಣುತ್ತಿತ್ತಂತೆ. ಘಟನಾ ಸ್ಥಳಕ್ಕೆ ಕಂದಾಯ, ಪಂಚಾಯತ್ ಅಧಿಕಾರಿಗಳು, ಗ್ರಾ. ಪಂ. ನಿಕಟ ಪೂರ್ವ ಅಧ್ಯಕ್ಷ ಯೋಗೀಶ್ ಆಲಂಬಿಲ, ಸದಸ್ಯ ಜಗದೀಶ್ ಕೆಂಪಕೋಡಿ ಭೇಟಿ ನೀಡಿದ್ದಾರೆ.

Related posts

ಪವರ್ ಲಿಫ್ಟಿಂಗ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya

ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

Suddi Udaya

ಎಸ್ ಡಿ ಎಂ ಬೆಳ್ತಂಗಡಿ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಬಿ. ನಿರಂಜನ್ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಒಕ್ಕೂಟಗಳ ಪದಗ್ರಹಣ ಮತ್ತು ಸತ್ಯನಾರಾಯಣ ಪೂಜೆ

Suddi Udaya
error: Content is protected !!