25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಗೋಪಾಲಕೃಷ್ಣ ದೇವಸ್ಥಾನ ಬೆಂದ್ರಾಳ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಆಟೋಟ ಸ್ಪರ್ಧೆ

ತೋಟತ್ತಾಡಿ ಆ:26
ಶ್ರೀ ಗೋಪಾಲಕೃಷ್ಣ ದೇವಸ್ಥಾನ ಬೆಂದ್ರಾಳ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಆಟೋಟ ಸ್ಪರ್ಧೆಗಳು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಪ್ರಧಾನ ಅರ್ಚಕರು ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿ ಗೌರವಾಧ್ಯಕ್ಷ ಶ್ರೀ ಗೋಪಾಲಕೃಷ್ಣ ಇರ್ವತ್ರಾಯ ಮಾತನಾಡಿ ಭಗವಾನ್ ಶ್ರೀ ಕೃಷ್ಣ ಜನ್ಮಾಷ್ಟಮಿಯು ಆಚರಣೆಯು ಹಿಂದೂ ಸಮಾಜವು ಸಂಘಟಿತವಾಗಳು ನೇರವಾಗುತ್ತದೆ, ಮತ್ತು ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಮಹತ್ವವನ್ನು ವಿವರಿಸಿದರು, ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿ ಅಧ್ಯಕ್ಷ ಸುದರ್ಶನ್ ಗೌಡ ಪರಾರಿ, ಕಾರ್ಯದರ್ಶಿ ಕೀರ್ತನ್ ಶೆಟ್ಟಿ ಮೂರ್ಛೆ, ಕೋಶಾಧಿಕಾರಿ ಶಿವದಾಸನ್ ಪಾಲೆತ್ತಾಡಿ, ಶ್ರೀ ಸೋಮನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕಮಲಾಕ್ಷ ಪೂಜಾರಿ ಪಾದೆ,ಗ್ರಾಂ ಪಂ ಸದಸ್ಯ ಜಯಾನಂದ ಮೊದಲಾದವರಿದ್ದರು.ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳಿಗೆ ಮುದ್ದುಕೃಷ್ಣ ಸ್ಪರ್ಧೆ, ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆದವು, ಸಂಜೆ ಶ್ರೀ ದೇವರಿಗೆ ವಿಶೇಷ ಪೂಜೆ ಹಾಗೂ ವಿಠ್ಠಲ ನಾಯಕ್ ಕಲ್ಲಡ್ಕ ಮತ್ತು ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ನಡೆಯಿತು.

Related posts

ಕೋಳಿ ಅಂಕ ಅಪರಾಧವಾಗಿದ್ದು ಕಾನೂನು ಪಾಲಿಸುವಂತೆ ಪೊಲೀಸರಿಗೆ ಡೈರೆಕ್ಟರ್ ಜನರಲ್ ಆದೇಶ

Suddi Udaya

ತುಳುವೆರೆ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್. ಜೆ. ಮತದಾನ

Suddi Udaya

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

Suddi Udaya

ಕುಕ್ಕೇಡಿ ಗ್ರಾ.ಪಂ. ನ ಮೊದಲನೇ ಹಂತದ ಗ್ರಾಮ ಸಭೆ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಜೀವ ಜಲ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

22ನೇ ಮಹಿಳಾ ಆಲ್ ಇಂಡಿಯಾ ಇಂಟರ್ ಝೋನಲ್ ನೆಟ್ಬಾಲ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ 2 ಕ್ರೀಡಾಪಟುಗಳಿಗೆ ಬೆಳ್ಳಿ ಪದಕ

Suddi Udaya
error: Content is protected !!