March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

ಬೆಳ್ತಂಗಡಿ: ಎ.ಎಸ್.ಎನ್ ಕ್ರಿಯೇಷನ್ ಇವೆಂಟ್ ಮ್ಯಾನೇಜ್ಮೆಂಟ್ ಪ್ರೆಸೆಂಟ್ಸ್ ವಾಯ್ಸ್ ಆಫ್ ಮಲ್ನಾಡ್ ಮೂಡಿಗೆರೆ ಸೀಸನ್ 3 ರಲ್ಲಿ ಬಂದಾರು ಗ್ರಾಮದ ಬೈಪಾಡಿ ನೆರೋಲ್ದಪಳಿಕೆ ಹಳ್ಳಿ ಪ್ರತಿಭೆ ಕುಸುಮ ಎಂ ಎಸ್ ಫೈನಲ್ ಹಂತ ತಲುಪಿದ್ದಾರೆ.

ಅವಕಾಶ ಸಿಗುತ್ತಿಲ್ಲ ಎನ್ನುವವರ ಮಧ್ಯೆ, ಸಿಕ್ಕ ಅವಕಾಶವನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿ ಸದ್ದಿಲ್ಲದೇ ತಮ್ಮದೇ ಶೈಲಿಯಲ್ಲಿ ಗಾಯನ ಕ್ಷೇತ್ರದಲ್ಲಿ ಸುದ್ದಿ ಮಾಡುತ್ತಿರುವ ಹಳ್ಳಿ ಪ್ರತಿಭೆ ಕುಸುಮ ಎಂ ಎಸ್ ಇವರು ವಾಯ್ಸ್ ಆಫ್ ಮಲ್ನಾಡ್ ಇವರು ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತಕ್ಕೆ ತಲುಪಿದ 12 ಸ್ಪರ್ಧೆಗಳಲ್ಲಿ ಇವರು ಒಬ್ಬರಾಗಿರುತ್ತಾರೆ.

ಯಾವುದೇ ಸಂಗೀತ ತರಬೇತಿ ಇಲ್ಲದೆ, ಸತತ ಅಭ್ಯಾಸದಿಂದ ಗಾಯನಲೋಕದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ.
ಹನಿ ಹನಿ ಸೇರಿದರೆ ಹಳ್ಳ ಎನ್ನುವಂತೆ ಸಣ್ಣ ಪುಟ್ಟ ಅವಕಾಶಗಳಲ್ಲಿ ಭಾಗವಹಿಸಿ, ತೆರೆ ಮರೆಯಲ್ಲಿದ್ದ ಪ್ರತಿಭೆಯೊಂದು ಜನರ ಮೆಚ್ಚುಗೆಗಳಿಸಿ ಸಂಗೀತಕ್ಷೇತ್ರದಲ್ಲಿ ಹೆಸರುಗಳಿಸುತ್ತಿದ್ದಾರೆ.

Related posts

ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ 2026 ಸ್ವೀಕರಿಸಿದ ಶಾಸಕ ಹರೀಶ್ ಪೂಂಜ

Suddi Udaya

ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಅವರಿಗೆ ಸನ್ಮಾನ

Suddi Udaya

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ವಿಭಾಗದಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರಾಷ್ಟ್ರೀಯ ದಿನ

Suddi Udaya

ಮಾ.8: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ, ತುಂಗಪ್ಪ ಬಂಗೇರ ನೇತೃತ್ವದಲ್ಲಿ 18ನೇ ವರ್ಷದ ಸಾಮೂಹಿಕ ವಿವಾಹ

Suddi Udaya

ಡಿ.14: ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!