30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು ಸಂತಾನ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ: ಸಂತಾನ ಗೋಪಾಲ ಕೃಷ್ಣ ದೇವಸ್ಥಾನ ತೆಂಕಕಾರಂದೂರು ಇಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸನ್ಮಾನ ಕಾರ್ಯಕ್ರಮ, ವಿವಿಧ ಆಟೋಟ ಸ್ಪರ್ಧೆ ಗಳ ಉದ್ಘಾಟನೆ ಜರಗಿತು.

ಡಾ. ಎನ್ ಎಂ. ತುಳುಪುಳೆ ಶ್ರೀ ಕ್ಲಿನಿಕ್ ಅಳದಂಗಡಿ ಇವರು ಉದ್ಘಾಟಿಸಿದರು, ಈ ಸಂದರ್ಭದಲ್ಲಿ ಕೃಷಿಕರು, ಸಾಂಸ್ಕೃತಿಕ ಸಂಪನ್ನರಾದ ನಾರಾಯಣ ರೈ ಕಾರಂದೂರು, ಹಾಗೂ ದೇವಸ್ಥಾನದ ಗೌರವಾಧ್ಯಕ್ಷರಾದ, ಮುಜರಾಯಿ ಇಲಾಖೆಯ ಧಾರ್ಮಿಕ ಧತ್ತಿ ಪರಿಷತ್ತಿಗೆ ಆಯ್ಕೆಯಾದ ಕೆ.ಎಸ್.ಯೋಗೇಶ್ ಕುಮಾರ್ ಇವರುಗಳನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಕೆ ವಸಂತ ಸಾಲ್ಯಾನ್, ದೇವಸ್ಥಾನದ ಆಡಳಿತ ಮೊಕ್ತೇಸರಾದ ಸುಬ್ರಹ್ಮಣ್ಯ ನೂರಿತ್ತಾಯ, ದೇವಸ್ಥಾನ ಸಮಿತಿ ಯ ಅಧ್ಯಕ್ಷರಾದ ಪದ್ಮ ನಾಯ್ಕ ಉಪಸ್ಥಿತರಿದ್ದರು.

ಜಾರು ಕಂಬ ಸ್ಪರ್ಧೆ,ಮಕ್ಕಳಿಗೆ ಬಾಲಕೃಷ್ಣ ಸ್ಪರ್ಧೆ ಭಕ್ತಿ ಗೀತೆ ಸ್ಪರ್ಧೆ ಲಕ್ಕಿ ಗೇಮ್, ಗುಂಡೆಸೆತ, ಮಡಿಕೆ ಹೊಡೆಯುವ ಸ್ಪರ್ಧೆ, ಹಗ್ಗ ಜಗ್ಗಾಟ, ವಾಲಿಬಾಲ್, ಕಬಡ್ಡಿ ಹಾಗೂ ವಿವಿಧ ಸ್ಪರ್ಧೆ ಗಳು ನಡೆಯಲಿವೆ,

Related posts

ಕಾಯರ್ತಡ್ಕ: ಹದಗೆಟ್ಟ ರಸ್ತೆ, ಶಿಲಾನ್ಯಾಸಗೊಂಡ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ಪ್ರತಿಭಟನೆಗೆ ಗ್ರಾಮಸ್ಥರ ಸಿದ್ದತೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ

Suddi Udaya

ರಾಜ್ಯಮಟ್ಟದ ಕರಾಟೆ: ಕಾಯರ್ತಡ್ಕ ದಿವ್ಯಜ್ಯೋತಿ ಆಂ.ಮಾ. ಶಾಲೆಯ ಅಡ್ಲಿನ್ ಎಲಿಜಬೆತ್ ಜೆರಿನ್ ಗೆ ಚಿನ್ನದ ಪದಕ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮನ್ ಶರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕೆ ಆಯ್ಕೆ

Suddi Udaya

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

“ಸಿಂಧೂರ್” ಅರ್ಥಪೂರ್ಣವಾದ ಆಪರೇಷನ್: ಪೀತಾಂಬರ ಹೆರಾಜೆ

Suddi Udaya
error: Content is protected !!