September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು ಸಂತಾನ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ: ಸಂತಾನ ಗೋಪಾಲ ಕೃಷ್ಣ ದೇವಸ್ಥಾನ ತೆಂಕಕಾರಂದೂರು ಇಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸನ್ಮಾನ ಕಾರ್ಯಕ್ರಮ, ವಿವಿಧ ಆಟೋಟ ಸ್ಪರ್ಧೆ ಗಳ ಉದ್ಘಾಟನೆ ಜರಗಿತು.

ಡಾ. ಎನ್ ಎಂ. ತುಳುಪುಳೆ ಶ್ರೀ ಕ್ಲಿನಿಕ್ ಅಳದಂಗಡಿ ಇವರು ಉದ್ಘಾಟಿಸಿದರು, ಈ ಸಂದರ್ಭದಲ್ಲಿ ಕೃಷಿಕರು, ಸಾಂಸ್ಕೃತಿಕ ಸಂಪನ್ನರಾದ ನಾರಾಯಣ ರೈ ಕಾರಂದೂರು, ಹಾಗೂ ದೇವಸ್ಥಾನದ ಗೌರವಾಧ್ಯಕ್ಷರಾದ, ಮುಜರಾಯಿ ಇಲಾಖೆಯ ಧಾರ್ಮಿಕ ಧತ್ತಿ ಪರಿಷತ್ತಿಗೆ ಆಯ್ಕೆಯಾದ ಕೆ.ಎಸ್.ಯೋಗೇಶ್ ಕುಮಾರ್ ಇವರುಗಳನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಕೆ ವಸಂತ ಸಾಲ್ಯಾನ್, ದೇವಸ್ಥಾನದ ಆಡಳಿತ ಮೊಕ್ತೇಸರಾದ ಸುಬ್ರಹ್ಮಣ್ಯ ನೂರಿತ್ತಾಯ, ದೇವಸ್ಥಾನ ಸಮಿತಿ ಯ ಅಧ್ಯಕ್ಷರಾದ ಪದ್ಮ ನಾಯ್ಕ ಉಪಸ್ಥಿತರಿದ್ದರು.

ಜಾರು ಕಂಬ ಸ್ಪರ್ಧೆ,ಮಕ್ಕಳಿಗೆ ಬಾಲಕೃಷ್ಣ ಸ್ಪರ್ಧೆ ಭಕ್ತಿ ಗೀತೆ ಸ್ಪರ್ಧೆ ಲಕ್ಕಿ ಗೇಮ್, ಗುಂಡೆಸೆತ, ಮಡಿಕೆ ಹೊಡೆಯುವ ಸ್ಪರ್ಧೆ, ಹಗ್ಗ ಜಗ್ಗಾಟ, ವಾಲಿಬಾಲ್, ಕಬಡ್ಡಿ ಹಾಗೂ ವಿವಿಧ ಸ್ಪರ್ಧೆ ಗಳು ನಡೆಯಲಿವೆ,

Related posts

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಎಂ. ಗಂಗಾಧರ ಮಿತ್ತಮಾರ್, ಪ್ರಧಾನ ಸಂಚಾಲಕರಾಗಿ ಪಿ. ಎಚ್. ನಿತ್ಯಾನಂದ ಶೆಟ್ಟಿ ನೇಮಕ

Suddi Udaya

ಬೆಳಾಲು : ಅನೈತಿಕ ಸಂಬಂಧದಿಂದ ಪತ್ನಿಯನ್ನು ಬಾವಿಗೆ ತಳ್ಳಿದ ಪತಿ: ಧರ್ಮಸ್ಥಳ ಪೊಲೀಸರ ಲಾಠಿ ರುಚಿಗೆ ಸತ್ಯಾಂಶ ಬಯಲು

Suddi Udaya

ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪೊಲೀಸರು: ಆರೋಪಿ ತೆಕ್ಕಾರು ನಿವಾಸಿ ಮಹಮ್ಮದ್ ಫಾರೂಕ್ ಮತ್ತು ಕಳವುಗೈದ ನಗದು ವಶ

Suddi Udaya

ಮಚ್ಚಿನ ಜಲಾಯನ ಸಮಿತಿಯಿಂದ ಅರ್ಹ ಫಲಾನುಭವಿಗಳಿಗೆ ಕೋಳಿಮರಿ ವಿತರಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯ ಬಾಲಕ ಬಾಲಕಿಯರ ನೂತನ ಶೌಚಾಲಯದ ಹಸ್ತಾಂತರ

Suddi Udaya

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

Suddi Udaya
error: Content is protected !!