23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

ಬೆಳ್ತಂಗಡಿ:ಮುಂಡಾಜೆ ಗ್ರಾಮದ ಕಡಂಬಳ್ಳಿ ಎಂಬಲ್ಲಿ ಎಚ್ ಟಿ ಲೈನ್ ವಿದ್ಯುತ್ ತಂತಿ ಕಡಿದು ಬಿದ್ದು ಮೆಸ್ಕಾಂನ ಸಕಾಲಿಕ ಸ್ಪಂದನೆಯಿಂದ ಸಂಭವನೀಯ ಅನಾಹುತ ತಪ್ಪಿದೆ.


ಕಡಂಬಳ್ಳಿಯ ತಂಬೂರಿ ಪದ್ಮನಾಭ ಪಟವರ್ಧನ್ ಎಂಬವರ ರಬ್ಬರ್ ತೋಟದಲ್ಲಿ ಹಾದು ಹೋಗಿರುವ ಎಚ್ ಟಿ ಲೈನ್ ವಿದ್ಯುತ್ ತಂತಿ ಸೋಮವಾರ ಮುಂಜಾನೆ ೪ರ ಸುಮಾರಿಗೆ ಕಡಿದು ಬಿದ್ದು ತೋಟದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತು. ಮನೆಯವರು ತಕ್ಷಣ ಪರಿಸರದ ಮಂದಿ ಹಾಗೂ ಮೆಸ್ಕಾಂ ಜೆಇಯವರಿಗೆ ಫೋನ್ ಮೂಲಕ ವಿಚಾರ ತಿಳಿಸಿದ್ದಾರೆ ಕೂಡಲೇ ಕಕ್ಕಿಂಜೆ ಸಬ್ ಸ್ಟೇಷನ್ ನಿಂದ ವಿದ್ಯುತ್ ಲೈನ್ ಆಫ್ ಮಾಡಿದ ಕಾರಣ ಹಾಗೂ ಮಳೆ ಇದ್ದುದರಿಂದ ಬೆಂಕಿ ಹತೋಟಿಗೆ ಬಂತು. ತಂತಿ ತುಂಡಾಗಿ ಬಿದ್ದ ಕಾರಣ ಪರಿಸರದ ನೂರಾರು ಮನೆಗಳಿಗೆ ಮಧ್ಯಾಹ್ನದವರೆಗೂ ವಿದ್ಯುತ್ ವ್ಯತ್ಯಯ ಉಂಟಾಯಿತು.

Related posts

ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಆನಂದ, ಕಾರ್ಯದರ್ಶಿಯಾಗಿ ಸಂದೀಪ್ ಆಯ್ಕೆ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿಗೆ ಚುನಾವಣೆ ಬೆಳ್ತಂಗಡಿ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪೂವಾಜೆ ಅವಿರೋಧ ಆಯ್ಕೆ

Suddi Udaya

ಜಾಗತಿಕ ಹಾದಿಯಲ್ಲಿ ಅಗ್ರಿಲೀಫ್‌ಗೆ ಭಾರೀ ಬಲ: ರೂ.10 ಕೋಟಿ ನಿಧಿ ಸಂಗ್ರಹ — ಭಾರತ ಮತ್ತು ಯುರೋಪ್–ಯುಕೆ ವಿಸ್ತರಣೆಗೆ ವೇಗ

Suddi Udaya

ಜ.24-30: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮೂರನೇ ಅಂತರಾಷ್ಟ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾಸಮ್ಮೇಳನ ಉದ್ಘಾಟನೆ

Suddi Udaya
error: Content is protected !!