September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

ಬೆಳ್ತಂಗಡಿ:ಮುಂಡಾಜೆ ಗ್ರಾಮದ ಕಡಂಬಳ್ಳಿ ಎಂಬಲ್ಲಿ ಎಚ್ ಟಿ ಲೈನ್ ವಿದ್ಯುತ್ ತಂತಿ ಕಡಿದು ಬಿದ್ದು ಮೆಸ್ಕಾಂನ ಸಕಾಲಿಕ ಸ್ಪಂದನೆಯಿಂದ ಸಂಭವನೀಯ ಅನಾಹುತ ತಪ್ಪಿದೆ.


ಕಡಂಬಳ್ಳಿಯ ತಂಬೂರಿ ಪದ್ಮನಾಭ ಪಟವರ್ಧನ್ ಎಂಬವರ ರಬ್ಬರ್ ತೋಟದಲ್ಲಿ ಹಾದು ಹೋಗಿರುವ ಎಚ್ ಟಿ ಲೈನ್ ವಿದ್ಯುತ್ ತಂತಿ ಸೋಮವಾರ ಮುಂಜಾನೆ ೪ರ ಸುಮಾರಿಗೆ ಕಡಿದು ಬಿದ್ದು ತೋಟದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತು. ಮನೆಯವರು ತಕ್ಷಣ ಪರಿಸರದ ಮಂದಿ ಹಾಗೂ ಮೆಸ್ಕಾಂ ಜೆಇಯವರಿಗೆ ಫೋನ್ ಮೂಲಕ ವಿಚಾರ ತಿಳಿಸಿದ್ದಾರೆ ಕೂಡಲೇ ಕಕ್ಕಿಂಜೆ ಸಬ್ ಸ್ಟೇಷನ್ ನಿಂದ ವಿದ್ಯುತ್ ಲೈನ್ ಆಫ್ ಮಾಡಿದ ಕಾರಣ ಹಾಗೂ ಮಳೆ ಇದ್ದುದರಿಂದ ಬೆಂಕಿ ಹತೋಟಿಗೆ ಬಂತು. ತಂತಿ ತುಂಡಾಗಿ ಬಿದ್ದ ಕಾರಣ ಪರಿಸರದ ನೂರಾರು ಮನೆಗಳಿಗೆ ಮಧ್ಯಾಹ್ನದವರೆಗೂ ವಿದ್ಯುತ್ ವ್ಯತ್ಯಯ ಉಂಟಾಯಿತು.

Related posts

ಗಾಳಿ ಮಳೆ: ಕಳಿಯ-ನ್ಯಾಯತರ್ಪು ವ್ಯಾಪಕ ಹಾನಿ15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

Suddi Udaya

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಾತ್ರಿ ನಿವಾಸ ಹಾಗೂ ಅನ್ನ ಛತ್ರದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಕೋರ್ಟ್ ಆದೇಶ ಉಲ್ಲಂಘಿಸಿ ಯಾವುದೇ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿಯವರಿಗೆ ಎಚ್ಚರಿಕೆ: ಪ್ರತಿಬಂಧಕಾದೇಶ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ಸರಕಾರ ಹಾಗೂ ಗೃಹ ಇಲಾಖೆಗೆ, ಉನ್ನತ ಪೊಲೀಸ್ ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಕ್ಕೆ ಪ್ರೋತ್ಸಾಹ :ಎಸ್.ಡಿ.ಎಂ ಪ್ರತಿಪಾದನೆಗೆ ರಾಷ್ಟಮಟ್ಟದ ಮನ್ನಣೆ

Suddi Udaya
error: Content is protected !!