30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಮೊದಲ ಸುತ್ತಿನಲ್ಲೇ ಏಮ್ಸ್ ಗೆ ಆಯ್ಕೆ

ಗುರುವಾಯನಕೆರೆ: ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆ ಬರೆದು ಏಮ್ಸ್ ( ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ) ಸೇರುವ ಕಾತರದಲ್ಲಿ ಭಾರತದ ಲಕ್ಷಾಂತರ ವಿದ್ಯಾರ್ಥಿಗಳು ಇರುವ ಸಂದರ್ಭದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮತ್ತೆ ಸಾಧನೆ ಮೆರೆದಿದ್ದಾರೆ. 720 ಅಂಕಗಳ ನೀಟ್ ಪರೀಕ್ಷೆಯಲ್ಲಿ 710 ಅಂಕಗಳನ್ನು ಪಡೆದು, ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದ ಪ್ರಜ್ವಲ್ ಎಚ್. ಎಂ ಗೆ ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾದ ಒಡಿಶಾದ ಭುವನೇಶ್ವರ ಏಮ್ಸ್ ನಲ್ಲಿ ಮೊದಲ ಸುತ್ತಿನಲ್ಲೇ ಪ್ರವೇಶಾತಿಗೆ ಅವಕಾಶ ದೊರಕಿದೆ.


ಈ ಹಿಂದಿನ ಶೈಕ್ಷಣಿಕ ವರ್ಷಗಳಲ್ಲಿ ಕೂಡಾ ಹಲವು ವಿದ್ಯಾರ್ಥಿಗಳನ್ನು ಏಮ್ಸ್, ಐ ಐ ಟಿ, ಎನ್ ಐ ಐ ಟಿ ಹಾಗೂ ರಾಷ್ಟ್ರದ ಪ್ರಮುಖ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಮತ್ತು ಉನ್ನತ ವೈಜ್ಞಾನಿಕ ಸಂಸ್ಥೆಗಳಲ್ಲಿ ವ್ಯಾಸಂಗ ನಡೆಸುವಂತೆ ತರಬೇತಿ ನೀಡಿದ್ದ ಎಕ್ಸೆಲ್ ನಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ದೇಶದ ಉನ್ನತ ಸಂಸ್ಥೆಗಳಲ್ಲಿ ಅವಕಾಶ ಪಡೆಯಲಿದ್ದಾರೆ.
ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಕಡಿರುದ್ಯಾವರ ಜಿ. ಪಂ. ಹಿ. ಪ್ರಾ ಶಾಲಾ ಎಸ್.ಡಿ.ಎಮ್.ಸಿ ಹಾಗೂ ಪೋಷಕರ ಸಭೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯರಿಗೆ ಬೀಳ್ಕೊಡುಗೆ

Suddi Udaya

ಬೆಳಾಲು ಶ್ರೀ ಮಾಯ ಮಹೇಶ್ವರ ದೇವಸ್ಥಾನದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

Suddi Udaya

ಬೆಳ್ತಂಗಡಿ ಮಹಿಳಾ ಜೆಸಿ ವಿಭಾಗದಿಂದ ಧ್ವನಿವರ್ಧಕ ಕೊಡುಗೆ

Suddi Udaya

ಮಿತ್ತಬಾಗಿಲು ಕಾಡು ಹಂದಿ ಬೇಟೆ: ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!