25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ

ನಾವೂರು : ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನಾವೂರು ಬ್ರಾಂಚ್ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಕಂಡತ್ತ್ ಲ್ ಒರು ನಾಳ್ ( ಕೆಸರುಗದ್ದೆ ) ಕ್ರೀಡಾಕೂಟ ಕಾರ್ಯಕ್ರಮ ನಾವೂರು ಗ್ರಾಮದ ದುಗಳಚ್ಚಿಲ್ ನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಪಿಐ ನಾವೂರು ಬ್ರಾಂಚ್ ಅಧ್ಯಕ್ಷ ಸ್ವಾದಿಕ್ ನಾವೂರು ವಹಿಸಿದ್ದರು. ಕಾರ್ಯಕ್ರಮದ ಪ್ರಯುಕ್ತ ಊರಿನ ನಾಗರಿಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಮಕ್ಕಳು, ಯುವಕರು, ಹಿರಿಯರು ಬೆಳಿಗ್ಗೆಯಿಂದ ಸಂಜೆವರೆಗೂ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿ ಸಂತೋಷಪಟ್ಟರು. ಕ್ರೀಡಾಕೂಟವನ್ನು ರಿಯಾಜ್ ಬೆಳ್ತಂಗಡಿ ನಡೆಸಿಕೊಟ್ಟರು.

ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಇನ್ಫಾಮೇಟ್ ಫೌಂಡೇಶನ್ ಇದರ ನಿರ್ದೇಶಕ ಅಬ್ದುಲ್ ಖಾದರ್ ನಾವೂರು ಮಾತನಾಡಿ ಮಾನಸಿಕ, ದೈಹಿಕ ಆರೋಗ್ಯಕ್ಕೆ ಕ್ರೀಡೆ ಬಹಳ ಮುಖ್ಯವಾಗಿದ್ದು ಇಂತಹ ಸೌಹಾರ್ದ ಕ್ರೀಡಾ ಕಾರ್ಯಕ್ರಮಗಳಿಂದ ಗ್ರಾಮದಲ್ಲಿ ಅನ್ಯೋನ್ಯತೆ ಒಗ್ಗಟ್ಟು ಬೆಳೆಯಲು ಸಹಕಾರಿಯಾಗುತ್ತದೆ ಎಂದರು.

ವೇದಿಕೆಯಲ್ಲಿ ಎಸ್.ಡಿ.ಪಿಐ ನಾವೂರು ಬ್ರಾಂಚ್ ಸಮಿತಿ ಅಧ್ಯಕ್ಷ ಸ್ವಾದಿಕ್ ನಾವೂರು, ಕಾರ್ಯದರ್ಶಿ ಶಹೀಮ್ ಮುರ, ಕೋಶಾಧಿಕಾರಿ ಇಸಾಕ್ ಸಿ. ಎಂ, ಜೊತೆ ಕಾರ್ಯದರ್ಶಿ ಸಲೀಮ್ ಮುರ, ಉಪಾಧ್ಯಕ್ಷ ಸಾದಿಕ್ ಕಿರ್ನಡ್ಕ, ಕಾರ್ಯಕ್ರಮದ ಉಸ್ತುವಾರಿ ಅಶ್ರಫ್ ಎನ್. ಹೆಚ್, ಅಬೂಸ್ವಾಲಿಹ್ ದುಗಳಚ್ಚಿಲ್, ಇಬ್ರಾಹೀಮ್ ಎನ್ ಎಚ್, ಹಮೀದ್ ಎನ್ ಎಸ್, ಕೇಳ್ತಾಜೆ ಜುಮಾ ಮಸೀದಿ ಅಧ್ಯಕ್ಷ ಹನೀಫ್, ರಿಯಾಝ್ ಬೆಳ್ತಂಗಡಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ ವಿತರಿಸಲಾಯಿತು.

Related posts

ಭಾರತೀಯ ಸೇನೆಯಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಶಿವಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya

ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿಗೆ ದಾಖಲೆಯ ಫಲಿತಾಂಶ ಅತ್ಯಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್‌ ಗೆ ಅವಕಾಶ ಕಲ್ಪಿಸಿದ ಎಕ್ಸೆಲ್‌ ಕಾಲೇಜು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್‌ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌

Suddi Udaya

ಕೃಷಿಕ ಕಲಾಯ ದಾಮೋದರ ಬಂಗೇರ ನಿಧನ

Suddi Udaya

ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

Suddi Udaya

ಅರುವ ನಮ ಮಾತೆರ್ಲ ಒಂಜೇ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!