30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಾರ್ಯಲಯ ಉದ್ಘಾಟನೆ

ಬೆಳ್ತಂಗಡಿ: ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಹಾಗೂ ಸಮಿತಿಗಳನ್ನು ರಚಿಸಿ ಆದೇಶಿಸಿದಂತೆ ಬೆಳ್ತಂಗಡಿ ತಾಲೂಕು ಆಡಳಿತ ಕಚೇರಿಯಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಕಚೇರಿಯನ್ನು ಜಿಲ್ಲಾ ಪಂಚ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ವಿಧಾನಸಭಾ ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅಧಿಕಾರಕ್ಕೆ ಬಂದು ಆರು ತಿಂಗಳೊಳಗೆ ಕರ್ನಾಟಕದ ಜನತೆಗೆ ತಲುಪಿಸುವ ಕೆಲಸ ಮಾಡಿದ್ದಾರೆ ಎಂದರು.

ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ ಮಾತನಾಡಿ ಶರವೇಗದಲ್ಲಿ ಪಂಚ ಗ್ಯಾರಂಟಿಗಳನ್ನು ಜನರಿಗೆ ತಲುಪಿಸುವಲ್ಲಿ ಕಾಂಗ್ರೇಸ್ ಸರಕಾರ ಯಶಸ್ವಿಯಾಗಿದೆ.ಈ ಯೋಜನೆಯಿಂದ ಕೊಟ್ಯಂತರ ಕುಟುಂಬಗಳು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಎಂದರು.

ಬೆಳ್ತಂಗಡಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಮಾತನಾಡಿ ಕೆಲವೊಂದು ಕಾರಣಗಳಿಂದ ಪಂಚ ಯೋಜನೆಗಳು ತಲುಪದ ಮನೆಗಳಿಗೆ ನಮ್ಮ ತಂಡಗಳನ್ನು ಕಳಿಸಿ ವಿವರಗಳನ್ನು ಪಡೆಯುವ ಮೂಲಕ ಅವರಿಗೆ ಯೋಜನೆಯನ್ನು ತಲುಪಿಸುವ ಪ್ರಯತ್ನ ಮಾಡುತ್ತೇವೆ. ಕಳೆದ 25 ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುತ್ತಿದ್ದು ಸರಕಾರ ನನ್ನನ್ನು ಗುರುತಿಸಿ ಒಳ್ಳೆಯ ಸ್ಥಾನಮಾನ ನೀಡಿದೆ ಎಂದರು.

ಕಾರ್ಯಕ್ರಮದಲ್ಲಿ ಉಭಯ ಬ್ಲಾಕ್ ಕಾಂಗ್ರೇಸ್ ಘಟಕದ ಅಧ್ಯಕ್ಷರಾದ ಸತೀಶ್ ಕಾಶಿಪಟ್ನ, ನಾಗೇಶ್ ಕುಮಾರ್ ಗೌಡ,ಜಿ.ಪಂ ಮಾಜಿ ಸದಸ್ಯರಾದ ಸಾಹುಲ್ ಹಮೀದ್,ನಮಿತಾ ಕೆ ಪೂಜಾರಿ,ಶೇಖರ್ ಕುಕ್ಕೇಡಿ,ಧರಣೇಂದ್ರ ಕುಮಾರ್, ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂ ಡೀಸೋಜಾ,ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್,ಅಪರ ಸರಕಾರಿ ವಕೀಲರಾದ ಮನೋಹರ್ ಕುಮಾರ್,ಮಾಜಿ ತಾ.ಪಂ ಸದಸ್ಯರಾದ ಈಶ್ವರ ಭಟ್, ವಿನ್ಸೆಂಟ್ ಡಿಸೋಜಾ,ಪ್ರವೀಣ್ ಫೆರ್ನಾಂಡೀಸ್ ಉಜಿರೆ,ಗೋಪಿನಾಥ ನಾಯಕ್, ಜಯವಿಕ್ರಮ್, ಜಗದೀಶ್ ಡಿ,ಎಸ್.ಸಿ ಘಟಕದ ಅಧ್ಯಕ್ಷರಾದ ಓಬಯ್ಯ ಆರಂಬೋಡಿ, ಅಕ್ರಮ‌ ಸಕ್ರಮ ಸಮಿತಿ ಸದಸ್ಯರಾದ ವಿನುತಾ ರಜತ್ ಗೌಡ, ಪ್ರಮುಖರಾದ ಸಂಜೀವ ಪೂಜಾರಿ ಕೊಡಂಗೆ, ಬಾಲಕೃಷ್ಣ ಶೆಟ್ಟಿ, ಚಿದಾನಂದ ಪೂಜಾರಿ ಎಲ್ದಕ್ಕ,ಮಹಮ್ಮದ್ ಶಾಫಿ ಕಾಶಿಪಟ್ನ, ಯಶೋಧ ಕುತ್ಲೂರು,ನಾರಾಯಣ ಗೌಡ ದೇವಸ್ಯ,ಪುನಿತ್ ಮಡಂತ್ಯಾರ್,ಸೆಲೆಸ್ಟಿನ್ ಡಿಸೋಜಾ, ಪಂಚ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಸದಸ್ಯರಾದ ವಂದನಾ ಕುಮಾರಿ, ಕೆ.ನೇಮಿರಾಜ ಕಿಲ್ಲೂರು,ಹಕೀಂ ಕೊಕ್ಕಡ,ಸೌಮ್ಯ ಲಾಯಿಲ,ವೀರಪ್ಪ ಮೊಯ್ಲಿ,ವಾಸುದೇವ ರಾವ್,ವಿಜಯ ಗೌಡ ಬೆಳಾಲು, ಸತೀಶ್ ಹೆಗ್ಡೆ,ಅಬ್ದುಲ್ ಸಲಾಂ, ಮರಿಟಾ ಪಿಂಟೋ, ಶ್ರೀಪತಿ ಉಪಾಧ್ಯಾಯ,ಕೇಶವ ನಾಯ್ಕ್,ಯತೀಶ್, ಶರೀಫ್ ಶಬರಬೈಲು ಹಾಗೂ ಕಾಂಗ್ರೇಸ್ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಸ್ವಾಗತಿಸಿದರು.ತಾ.ಪಂ ಮ್ಯಾನೇಜರ್ ಪ್ರಶಾಂತ್ ಡಿ.ಬಳಂಜ,ಸಹಾಯಕ ಲೆಕ್ಕಧಿಕಾರಿ ಗಣೇಶ್ ಪೂಜಾರಿ ಉಪಸ್ಥಿತರಿದ್ದರು

Related posts

ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನಿಗೆ ಜೀವ ಬೆದರಿಕೆ ಹಿನ್ನೆಲೆ ರಕ್ಷಣೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ

Suddi Udaya

ಬಚ್ಚಿರೆ ಬಜ್ಜೈ ವಾಟ್ಸಾಪ್ ಗ್ರೂಪ್ ಸ್ನೇಹ ಸಮ್ಮಿಲನ

Suddi Udaya

ಅಂತರ್ ರಾಜ್ಯ ಖೋ ಖೋ ಪಂದ್ಯಾಟ: ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ನಯನಾಡು ಸ.ಪ್ರೌ. ಶಾಲೆ ವಿದ್ಯಾರ್ಥಿಗಳು

Suddi Udaya

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya
error: Content is protected !!