23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

ಬೆಳ್ತಂಗಡಿ:ಮುಂಡಾಜೆ ಗ್ರಾಮದ ಕಡಂಬಳ್ಳಿ ಎಂಬಲ್ಲಿ ಎಚ್ ಟಿ ಲೈನ್ ವಿದ್ಯುತ್ ತಂತಿ ಕಡಿದು ಬಿದ್ದು ಮೆಸ್ಕಾಂನ ಸಕಾಲಿಕ ಸ್ಪಂದನೆಯಿಂದ ಸಂಭವನೀಯ ಅನಾಹುತ ತಪ್ಪಿದೆ.


ಕಡಂಬಳ್ಳಿಯ ತಂಬೂರಿ ಪದ್ಮನಾಭ ಪಟವರ್ಧನ್ ಎಂಬವರ ರಬ್ಬರ್ ತೋಟದಲ್ಲಿ ಹಾದು ಹೋಗಿರುವ ಎಚ್ ಟಿ ಲೈನ್ ವಿದ್ಯುತ್ ತಂತಿ ಸೋಮವಾರ ಮುಂಜಾನೆ ೪ರ ಸುಮಾರಿಗೆ ಕಡಿದು ಬಿದ್ದು ತೋಟದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತು. ಮನೆಯವರು ತಕ್ಷಣ ಪರಿಸರದ ಮಂದಿ ಹಾಗೂ ಮೆಸ್ಕಾಂ ಜೆಇಯವರಿಗೆ ಫೋನ್ ಮೂಲಕ ವಿಚಾರ ತಿಳಿಸಿದ್ದಾರೆ ಕೂಡಲೇ ಕಕ್ಕಿಂಜೆ ಸಬ್ ಸ್ಟೇಷನ್ ನಿಂದ ವಿದ್ಯುತ್ ಲೈನ್ ಆಫ್ ಮಾಡಿದ ಕಾರಣ ಹಾಗೂ ಮಳೆ ಇದ್ದುದರಿಂದ ಬೆಂಕಿ ಹತೋಟಿಗೆ ಬಂತು. ತಂತಿ ತುಂಡಾಗಿ ಬಿದ್ದ ಕಾರಣ ಪರಿಸರದ ನೂರಾರು ಮನೆಗಳಿಗೆ ಮಧ್ಯಾಹ್ನದವರೆಗೂ ವಿದ್ಯುತ್ ವ್ಯತ್ಯಯ ಉಂಟಾಯಿತು.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಎಸ್ ಡಿ ಎಂ ಎನ್ ಎಸ್ ಎಸ್ ಘಟಕಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ

Suddi Udaya

ಕಾಕ೯ಳ ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ 5ನೇ ಹೊಸ್ಮಾರಿನ ಶಾಖೆ ಉದ್ಘಾಟನೆ

Suddi Udaya

ಎಸ್‌ಡಿಪಿಐ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ ಕಂಡಡ್ ಒಂಜಿದಿನ ಕ್ರೀಡಾಕೂಟ.

Suddi Udaya

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

Suddi Udaya

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

Suddi Udaya
error: Content is protected !!