25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

ಬೆಳ್ತಂಗಡಿ:ಮುಂಡಾಜೆ ಗ್ರಾಮದ ಕಡಂಬಳ್ಳಿ ಎಂಬಲ್ಲಿ ಎಚ್ ಟಿ ಲೈನ್ ವಿದ್ಯುತ್ ತಂತಿ ಕಡಿದು ಬಿದ್ದು ಮೆಸ್ಕಾಂನ ಸಕಾಲಿಕ ಸ್ಪಂದನೆಯಿಂದ ಸಂಭವನೀಯ ಅನಾಹುತ ತಪ್ಪಿದೆ.


ಕಡಂಬಳ್ಳಿಯ ತಂಬೂರಿ ಪದ್ಮನಾಭ ಪಟವರ್ಧನ್ ಎಂಬವರ ರಬ್ಬರ್ ತೋಟದಲ್ಲಿ ಹಾದು ಹೋಗಿರುವ ಎಚ್ ಟಿ ಲೈನ್ ವಿದ್ಯುತ್ ತಂತಿ ಸೋಮವಾರ ಮುಂಜಾನೆ ೪ರ ಸುಮಾರಿಗೆ ಕಡಿದು ಬಿದ್ದು ತೋಟದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತು. ಮನೆಯವರು ತಕ್ಷಣ ಪರಿಸರದ ಮಂದಿ ಹಾಗೂ ಮೆಸ್ಕಾಂ ಜೆಇಯವರಿಗೆ ಫೋನ್ ಮೂಲಕ ವಿಚಾರ ತಿಳಿಸಿದ್ದಾರೆ ಕೂಡಲೇ ಕಕ್ಕಿಂಜೆ ಸಬ್ ಸ್ಟೇಷನ್ ನಿಂದ ವಿದ್ಯುತ್ ಲೈನ್ ಆಫ್ ಮಾಡಿದ ಕಾರಣ ಹಾಗೂ ಮಳೆ ಇದ್ದುದರಿಂದ ಬೆಂಕಿ ಹತೋಟಿಗೆ ಬಂತು. ತಂತಿ ತುಂಡಾಗಿ ಬಿದ್ದ ಕಾರಣ ಪರಿಸರದ ನೂರಾರು ಮನೆಗಳಿಗೆ ಮಧ್ಯಾಹ್ನದವರೆಗೂ ವಿದ್ಯುತ್ ವ್ಯತ್ಯಯ ಉಂಟಾಯಿತು.

Related posts

ಬಂದಾರು ಗಿರಿಯಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕರಾವಳಿ ಅಭಿವೃದ್ಧಿ ಮಂಡಳಿ ರಚಿಸಿ ಬಜೆಟ್‌ನಲ್ಲಿ ರೂ.500 ಕೋಟಿ ಅನುದಾನ ಮೀಸಲಿಡಿ: ಬೆಳ್ತಂಗಡಿ ಪ್ರತಿಕಾಗೋಷ್ಠಿಯಲ್ಲಿ ಎಂಎಲ್ಸಿ ಐವನ್ ಡಿ’ಸೋಜ

Suddi Udaya

ಸೋಣಂದೂರು: ಜಿಲ್ಲಾ ಮಟ್ಟದ ಪುರುಷರ 55 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ ಭೂ ನ್ಯಾಯಮಂಡಳಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ

Suddi Udaya

ಬದಿನಡೆ ಪುಂಡಿಕಲ್ ಕುಕ್ಕು ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ,ಧಾರ್ಮಿಕ ಉಪನ್ಯಾಸ

Suddi Udaya

ರೂ. 1.10 ಕೋಟಿ ವೆಚ್ಚದ ಕೂಕ್ರಬೆಟ್ಟು ಪ್ರಾಥಮಿಕ ಶಾಲಾ ನೂತನ ಕಟ್ಟಡದ ಲೋಕಾರ್ಪಣೆ: ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಜಾರಿಗೆ ತನ್ನಿ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya
error: Content is protected !!