April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

ಬೆಳ್ತಂಗಡಿ: ಎ.ಎಸ್.ಎನ್ ಕ್ರಿಯೇಷನ್ ಇವೆಂಟ್ ಮ್ಯಾನೇಜ್ಮೆಂಟ್ ಪ್ರೆಸೆಂಟ್ಸ್ ವಾಯ್ಸ್ ಆಫ್ ಮಲ್ನಾಡ್ ಮೂಡಿಗೆರೆ ಸೀಸನ್ 3 ರಲ್ಲಿ ಬಂದಾರು ಗ್ರಾಮದ ಬೈಪಾಡಿ ನೆರೋಲ್ದಪಳಿಕೆ ಹಳ್ಳಿ ಪ್ರತಿಭೆ ಕುಸುಮ ಎಂ ಎಸ್ ಫೈನಲ್ ಹಂತ ತಲುಪಿದ್ದಾರೆ.

ಅವಕಾಶ ಸಿಗುತ್ತಿಲ್ಲ ಎನ್ನುವವರ ಮಧ್ಯೆ, ಸಿಕ್ಕ ಅವಕಾಶವನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿ ಸದ್ದಿಲ್ಲದೇ ತಮ್ಮದೇ ಶೈಲಿಯಲ್ಲಿ ಗಾಯನ ಕ್ಷೇತ್ರದಲ್ಲಿ ಸುದ್ದಿ ಮಾಡುತ್ತಿರುವ ಹಳ್ಳಿ ಪ್ರತಿಭೆ ಕುಸುಮ ಎಂ ಎಸ್ ಇವರು ವಾಯ್ಸ್ ಆಫ್ ಮಲ್ನಾಡ್ ಇವರು ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತಕ್ಕೆ ತಲುಪಿದ 12 ಸ್ಪರ್ಧೆಗಳಲ್ಲಿ ಇವರು ಒಬ್ಬರಾಗಿರುತ್ತಾರೆ.

ಯಾವುದೇ ಸಂಗೀತ ತರಬೇತಿ ಇಲ್ಲದೆ, ಸತತ ಅಭ್ಯಾಸದಿಂದ ಗಾಯನಲೋಕದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ.
ಹನಿ ಹನಿ ಸೇರಿದರೆ ಹಳ್ಳ ಎನ್ನುವಂತೆ ಸಣ್ಣ ಪುಟ್ಟ ಅವಕಾಶಗಳಲ್ಲಿ ಭಾಗವಹಿಸಿ, ತೆರೆ ಮರೆಯಲ್ಲಿದ್ದ ಪ್ರತಿಭೆಯೊಂದು ಜನರ ಮೆಚ್ಚುಗೆಗಳಿಸಿ ಸಂಗೀತಕ್ಷೇತ್ರದಲ್ಲಿ ಹೆಸರುಗಳಿಸುತ್ತಿದ್ದಾರೆ.

Related posts

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

Suddi Udaya

ನಾವೂರು 25ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ದೈವದ ಆಸನ(ಮುಕ್ಕಾರ್) ಸಮಪ೯ಣೆ: ವಾಸ್ತು ಶಿಲ್ಪಿ ಸುಂದರ ಆಚಾರ್ಯ ಮಡೆಂಜಿಮಾರುರವರಿಗೆ ಕ್ಷೇತ್ರದಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಜೈನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬಳಂಜ.ಬದಿನಡೆ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!