September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಯ್ಯೂರು ಸ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

ಕೊಯ್ಯೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು ದೇವಸ್ಥಾನ ಇದರ ಹಳೆ ವಿದ್ಯಾರ್ಥಿ ಸಂಘಕ್ಕೆ ಹೊಸ ಪದಾಧಿಕಾರಿಗಳ ಆಯ್ಕೆಯು ಆ. 26 ರಂದು ನಡೆಯಿತು.

ಗೌರವ ಸಲಹೆಗಾರರಾಗಿ ಅಶೋಕ್ ಭಟ್ ಅಗ್ರಸಾಲೆ, ಅನಂತಕೃಷ್ಣ ಭಟ್, ಡೀಕಯ್ಯ ಪೂಜಾರಿ, ಶ್ರೀಮತಿ ಶ್ಯಾಮಲಾ ಮುಖ್ಯೋಪಾಧ್ಯಾಯರು, ನವೀನ್ ಕುಮಾರ್ ವಾದ್ಯಕೋಡಿ, ಅಧ್ಯಕ್ಷರಾಗಿ ಚಂದ್ರಶೇಖರ ಮಾವಿನಕಟ್ಟೆ, ಉಪಾಧ್ಯಕ್ಷರಾಗಿ ನೋಣಯ್ಯ ಪೂಜಾರಿ, ಅದಿತಿ ಹೇಮಲ್ಕೆ, ಪ್ರಧಾನ ಕಾರ್ಯದರ್ಶಿಯಾಗಿ ವಿನಾಯಕ ಬೆದ್ರಲ್ಕೆ, ಜೊತೆ ಕಾರ್ಯದರ್ಶಿಗಳಾಗಿ ದೀಕ್ಷಿತ್ ಆರಂತೊಟ್ಟು,
ರವಿಚಂದ್ರ , ಕೋಶಾಧಿಕಾರಿಯಾಗಿ ಸದಾನಂದ ಗೌಡ ಅಡೆಂಕಿಲೊಟ್ಟು ಆಯ್ಕೆಯಾಗಿದ್ದಾರೆ.

ಸಭೆಯಲ್ಲಿ ಉಪಸ್ಥಿತರಿದ್ದ ಹಿರಿಯ ವಿದ್ಯಾರ್ಥಿಗಳನ್ನು ಸಂಘದ ಸಕ್ರಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುಧಾಕರ ದೇವಾಡಿಗ ವಹಿಸಿದ್ದರು. ವೇದಿಕೆಯಲ್ಲಿ ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನವೀನ್ ಕುಮಾರ್ ವಾದ್ಯಕೋಡಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಂತಕೃಷ್ಣ ಭಟ್ಟ ಹಾಗೂ ಎಸ್.ಡಿ.,ಎಮ್.ಸಿ ಉಪಾಧ್ಯಕ್ಷೆ ಶ್ರೀಮತಿ ಜಯಂತಿ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಮಾಜಿ ಕಾರ್ಯದರ್ಶಿ ಕೇಶವ ಗೌಡ ,ಗ್ರಾ.ಪಂ.ಸದಸ್ಯೆ ಶ್ರೀಮತಿ ವಿಶಾಲಕ್ಷಿ ಉಪಸ್ಥಿತರಿದ್ದರು.

ಶಿಕ್ಷಕ ಸೀತಾರಾಮ ಸ್ವಾಗತಿಸಿದರು ಮತ್ತು ಶಿಕ್ಷಕಿ ಶ್ರೀಮತಿ ಚೆನ್ನಮ್ಮ ನಿರೂಪಿಸಿ ವಂದಿಸಿದರು.

Related posts

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಬೇಸಿಗೆ ಶಿಬಿರ

Suddi Udaya

ಆಗಸ್ಟ್ 18: ಹೊಕ್ಕಾಡಿಗೋಳಿ ಫ್ರೆಂಡ್ಸ್ ಆಶ್ರಯದಲ್ಲಿ “ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್”

Suddi Udaya

ಸೆ.3 ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಶುಭಾರಂಭ, ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಡಾ|| ವೀರೇoದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ವರ್ಧoತಿ ಪ್ರಯುಕ್ತ ಗೌರವಾರ್ಪಣೆ

Suddi Udaya

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya

ಅಳದಂಗಡಿಯ ವಿದುಷಿ ವಿದ್ಯಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!