25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾಗತಿಕ ಸೀರೋ ಮಲಬಾರ್ ಧರ್ಮ ಸಂಸದ್ ಗೆ ಪಾಲಾದಲ್ಲಿ ಸಮಾಪ್ತಿ: ಬೆಳ್ತಂಗಡಿ ಧರ್ಮ ಪ್ರಾಂತ್ಯ ಭಾಗಿ

ಮಂಗಳೂರು :ಕೇರಳದ ಕೊಟ್ಟಯಂ ಜಿಲ್ಲೆಯ ಪಾಲ ಸೆಂಟ್ ಅಲ್ಫೋನ್ಸಿಯನ್ ಸೆಂಟರ್ ನಲ್ಲಿ ನಡೆದ ಜಾಗತಿಕ ಸೀರೋ ಮಲಬಾರ್ ಧರ್ಮ ಸಭೆಯ ಐದನೇ ಜಾಗತಿಕ ಧರ್ಮ ಸಂಸದ್ ನಲ್ಲಿ ಸೀರೋ ಮಲಬಾರ್ ಧರ್ಮ ಸಭೆಯ ಸುಮಾರು ಐದು ಭೂಖಂಡಗಳ ಹದಿನಾರು ದೇಶಗಳ ಮೂವತ್ತಾಯಿದು ಧರ್ಮ ಪ್ರಾಂತ್ಯಗಳ ಆಯ್ದ 348 ಮಂದಿ ಪ್ರತಿನಿಧಿಗಳ ಸಮ್ಮೇಳನವು ಆ.22 ರಿಂದ ಆ 25 ರ ವರೆಗೆ ಅತ್ಯಂತ ಯಶಸ್ವಿಯಾಗಿ ಜರಗಿತು.


ಕೇಂದ್ರ ಅಲ್ಪ ಸಂಖ್ಯಾತ ವ್ಯವಹಾರ ಮತ್ತು ಪಶು ಸಂಗೋಪನಾ ಸಚಿವ ಜೋರ್ಜ್ ಕುರಿಯನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಬೆಳ್ತಂಗಡಿ ಧರ್ಮ ಪ್ರಾಂತ್ಯದಿಂದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ, ವಿಕಾರ್ ಜೆನೆರಲ್ ಅತಿ ವಂದನಿಯ ಫಾ. ಜೋಸ್ ವಲಿಯಪರಂಭಿಲ್, ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ. ಶಾಜಿ ಮಾತ್ಯು ಕ್ಯಾಥೋಲಿಕ್ ಯೂನಿಯನ್ ನಿಕಟ ಪೂರ್ವ ಅಧ್ಯಕ್ಷರು ಧರ್ಮ ಪ್ರಾಂತಿಯ ಪಾಲನ ಸಮಿತಿಯ ಸದಸ್ಯರು ಹಿರಿಯ ವಕೀಲರು ಸೇವಿಯಾರ್ ಪಾಲೇಲಿ, ಧರ್ಮ ಪ್ರಾಂತ್ಯ ದ ಕೇಂದ್ರ ಪಾಲನ ಸಮಿತಿಯ ಸದಸ್ಯರು ಎ ಕೆ ಸಿ ಸಿ ಜಾಗತಿಕ ಕಾರ್ಯದರ್ಶಿಗಳಲ್ಲಿ ಓರ್ವ ರಾದ ಜೈಸನ್ ಪಟ್ಟೀರಿ, ಮಾತೃ ವೇದಿಕೆ ಧರ್ಮ ಪ್ರಾಂತಿಯ ಅಧ್ಯಕ್ಷೆ ಶ್ರೀಮತಿ ಮೆರ್ಸಿ ಚಾಕೋ ಬಜಗೋಳಿ, ಮಡಂತ್ಯಾರು ಕಾಲೇಜಿನ ಪ್ರಾದ್ಯಪಕ ಅಲ್ವಿನ್ ಕೊಚ್ಚು ಪುರಕಲ್ ವೇಣೂರು ಭಾಗವಹಿಸಿದರು.


ಕಾರ್ಯಕ್ರಮವು ಸೀರೋ ಮಲಬಾರ್ ಸಭೆಯ ಭವಿಷ್ಯದ ಮಾರ್ಗದರ್ಶನಕ್ಕಾಗಿ ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲು ವೇದಿಕೆ ಒದಗಿಸಿತು, ಮತ್ತು ಪ್ರತಿನಿಧಿಗಳಿಂದ ಅತ್ಯಧಿಕ ಸಹಕಾರವನ್ನು ಪಡೆದಿತು.

Related posts

ತೀರಾ ಹದಗೆಟ್ಟ ಪಡಂಗಡಿ ರಸ್ತೆ: ದುರಸ್ತಿಗೊಳಿಸುವಂತೆ ಪಡಂಗಡಿ ಗ್ರಾಮಸ್ಥರಿಂದ ಮನವಿ

Suddi Udaya

ಬೆಳ್ತಂಗಡಿಯಲ್ಲಿ ಬಸ್ ದರ ಹೆಚ್ಚಳ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಬೆಳ್ತಂಗಡಿ: ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ: ನೂತನ ಅಧ್ಯಕ್ಷರಾಗಿ ಭಗೀರಥ ಜಿ. ಆಯ್ಕೆ

Suddi Udaya

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಕಿಟ್ ವಿತರಣೆ

Suddi Udaya
error: Content is protected !!