30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾಗತಿಕ ಸೀರೋ ಮಲಬಾರ್ ಧರ್ಮ ಸಂಸದ್ ಗೆ ಪಾಲಾದಲ್ಲಿ ಸಮಾಪ್ತಿ: ಬೆಳ್ತಂಗಡಿ ಧರ್ಮ ಪ್ರಾಂತ್ಯ ಭಾಗಿ

ಮಂಗಳೂರು :ಕೇರಳದ ಕೊಟ್ಟಯಂ ಜಿಲ್ಲೆಯ ಪಾಲ ಸೆಂಟ್ ಅಲ್ಫೋನ್ಸಿಯನ್ ಸೆಂಟರ್ ನಲ್ಲಿ ನಡೆದ ಜಾಗತಿಕ ಸೀರೋ ಮಲಬಾರ್ ಧರ್ಮ ಸಭೆಯ ಐದನೇ ಜಾಗತಿಕ ಧರ್ಮ ಸಂಸದ್ ನಲ್ಲಿ ಸೀರೋ ಮಲಬಾರ್ ಧರ್ಮ ಸಭೆಯ ಸುಮಾರು ಐದು ಭೂಖಂಡಗಳ ಹದಿನಾರು ದೇಶಗಳ ಮೂವತ್ತಾಯಿದು ಧರ್ಮ ಪ್ರಾಂತ್ಯಗಳ ಆಯ್ದ 348 ಮಂದಿ ಪ್ರತಿನಿಧಿಗಳ ಸಮ್ಮೇಳನವು ಆ.22 ರಿಂದ ಆ 25 ರ ವರೆಗೆ ಅತ್ಯಂತ ಯಶಸ್ವಿಯಾಗಿ ಜರಗಿತು.


ಕೇಂದ್ರ ಅಲ್ಪ ಸಂಖ್ಯಾತ ವ್ಯವಹಾರ ಮತ್ತು ಪಶು ಸಂಗೋಪನಾ ಸಚಿವ ಜೋರ್ಜ್ ಕುರಿಯನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಬೆಳ್ತಂಗಡಿ ಧರ್ಮ ಪ್ರಾಂತ್ಯದಿಂದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ, ವಿಕಾರ್ ಜೆನೆರಲ್ ಅತಿ ವಂದನಿಯ ಫಾ. ಜೋಸ್ ವಲಿಯಪರಂಭಿಲ್, ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ. ಶಾಜಿ ಮಾತ್ಯು ಕ್ಯಾಥೋಲಿಕ್ ಯೂನಿಯನ್ ನಿಕಟ ಪೂರ್ವ ಅಧ್ಯಕ್ಷರು ಧರ್ಮ ಪ್ರಾಂತಿಯ ಪಾಲನ ಸಮಿತಿಯ ಸದಸ್ಯರು ಹಿರಿಯ ವಕೀಲರು ಸೇವಿಯಾರ್ ಪಾಲೇಲಿ, ಧರ್ಮ ಪ್ರಾಂತ್ಯ ದ ಕೇಂದ್ರ ಪಾಲನ ಸಮಿತಿಯ ಸದಸ್ಯರು ಎ ಕೆ ಸಿ ಸಿ ಜಾಗತಿಕ ಕಾರ್ಯದರ್ಶಿಗಳಲ್ಲಿ ಓರ್ವ ರಾದ ಜೈಸನ್ ಪಟ್ಟೀರಿ, ಮಾತೃ ವೇದಿಕೆ ಧರ್ಮ ಪ್ರಾಂತಿಯ ಅಧ್ಯಕ್ಷೆ ಶ್ರೀಮತಿ ಮೆರ್ಸಿ ಚಾಕೋ ಬಜಗೋಳಿ, ಮಡಂತ್ಯಾರು ಕಾಲೇಜಿನ ಪ್ರಾದ್ಯಪಕ ಅಲ್ವಿನ್ ಕೊಚ್ಚು ಪುರಕಲ್ ವೇಣೂರು ಭಾಗವಹಿಸಿದರು.


ಕಾರ್ಯಕ್ರಮವು ಸೀರೋ ಮಲಬಾರ್ ಸಭೆಯ ಭವಿಷ್ಯದ ಮಾರ್ಗದರ್ಶನಕ್ಕಾಗಿ ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲು ವೇದಿಕೆ ಒದಗಿಸಿತು, ಮತ್ತು ಪ್ರತಿನಿಧಿಗಳಿಂದ ಅತ್ಯಧಿಕ ಸಹಕಾರವನ್ನು ಪಡೆದಿತು.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿಯ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಪಶ್ಚಿಮ ಘಟ್ಟದ ಎಲ್ಲ ಅರಣ್ಯ ಒತ್ತುವರಿ ಮತ್ತು ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ಗಳನ್ನು ತೆರವುಗೊಳಿಸುವಂತೆ ಅರಣ್ಯ ಸಚಿವರಿಂದ ಖಡಕ್ ಸೂಚನೆ

Suddi Udaya

ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ ಬೆಳ್ತಂಗಡಿ ಶಾಖೆಗೆ ವರ್ಗಾವಣೆ: ಗ್ರಾಹಕರು ಹಾಗೂ ಸಿಬ್ಬಂದಿಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ಹೈಕೋರ್ಟು ಆದೇಶ

Suddi Udaya

ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ

Suddi Udaya
error: Content is protected !!