March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಐದು ದಿನ ಪೊಲೀಸ್ ಕಸ್ಟಡಿಗೆ

ಬೆಳ್ತಂಗಡಿ : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ (83) ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳು ಮೂರು ದಿನ ನ್ಯಾಯಾಂಗ ಬಂಧನಲ್ಲಿದ್ದು. ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಧೀಶರು ಇಬ್ಬರು ಆರೋಪಿಗಳನ್ನು ಐದು ದಿನಗಳವರೆಗೆ ಆ. 31 ರವರೆಗೆ ಹೆಚ್ಚಿನ ತನಿಖೆಗಾಗಿ ಧರ್ಮಸ್ಥಳ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ಅವರನ್ನು ಕೊಲೆ ಮಾಡಿದ ಆರೋಪಿಗಳಾದ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕಾಸರಗೋಡು ತಾಲೂಕಿನ ಕುಂಬ್ರಾಜೆ ಗ್ರಾಮದ ಒಡಬ್ಬಳ ನಿವಾಸಿಯಾಗಿರುವ ಅಳಿಯ ರಾಘವೇಂದ್ರ ಕೆದಿಲಾಯ( 53) ಮತ್ತು ಮೊಮ್ಮಗ ಮುರುಳಿಕೃಷ್ಣ (21) ಅವರನ್ನು ಧರ್ಮಸ್ಥಳ ಪೊಲೀಸರು ಆ.24 ರಂದು ರಾತ್ರಿ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು ನ್ಯಾಯಾಧೀಶರು ನ್ಯಾಯಂಗ ಬಂಧನ ವಿಧಿಸಲಾಗಿತ್ತು‌.

ಆ.27 ರಂದು ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಪ್ರಕರಣದ ತನಿಖಾಧಿಕಾರಿ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಹಾಜರುಪಡಿಸಿದ್ದು ಹೆಚ್ಚಿನ ತನಿಖೆಗಾಗಿ ಏಳು ದಿನಗಳ ವರೆಗೆ ಪೊಲೀಸ್ ಕಸ್ಟಡಿಗೆ ಕೇಳಿದ್ದು ನ್ಯಾಯಾಧೀಶರು ಐದು ದಿನ ಧರ್ಮಸ್ಥಳ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ‌.

Related posts

ಮುಂಡಾಜೆ ಪ. ಪೂ. ಕಾಲೇಜು: ಜಾಗೃತ ಜಾಗೃತಿ ಸಪ್ತಾಹ

Suddi Udaya

ಉಜಿರೆ ಗ್ರಾ.ಪಂ. ಅಮೃತ ಸಭಾಂಗಣ ಉದ್ಘಾಟನೆ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿಡೊಂಜಿ ದಿನ

Suddi Udaya

ತಿರುಮಲೇಶ್ವರ ಭಟ್ಟರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟ ಪ್ರಶಸ್ತಿ

Suddi Udaya

ಮುಗೇರಡ್ಕ ಅಂಗನವಾಡಿಯಲ್ಲಿ ಎಲ್ ಕೆಜಿ , ಯುಕೆಜಿ ಪ್ರಾರಂಭ

Suddi Udaya
error: Content is protected !!