25.7 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ಮಡಂತ್ಯಾರು: ಶ್ರೀಕೃಷ್ಣ ಜನ್ನಾಷ್ಟಮಿ ಸಮಿತಿಯಿಂದ 35 ನೇ ವರ್ಷದ ಮೊಸರು ಕುಡಿಕೆ ಉತ್ಸವ

ಮಡಂತ್ಯಾರು: ಶ್ರೀಕೃಷ್ಣ ಜನ್ನಾಷ್ಟಮಿ ಸಮಿತಿಯಿಂದ 35 ನೇ ವರ್ಷದ ಮೊಸರು ಕುಡಿಕೆ ಉತ್ಸವ ಗಣಪತಿ ಮಂಟಪ ಮಡಂತ್ಯಾರುವಿನಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಪಾರೆಂಕಿ ಮಾಜಿ ಆಡಳಿತ ಮೊಕ್ತೇಶರ ಎಂ.ವಿಠಲ ಶೆಟ್ಟಿ ನೇರವೇರಿಸಿ ಶುಭ ಕೋರಿದರು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಹಿಸಿದ್ದರು.ಕಾರ್ಯಕ್ರಮದಲ್ಲಿ ಯುವ ಗೌಡರ ಸಂಘದ ತಾಲೂಕು ಅಧ್ಯಕ್ಷ ಚಂದ್ರಕಾಂತ್ ಗೌಡ ನಿಡ್ಡಾಜೆ,ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷ ನಿತ್ಯಾನಂದ ಹೆಗ್ಡೆ,
ಉಪ್ಪಿನಂಗಡಿ‌ ಮೆಸ್ಕಾಂ ಇಲಾಖೆಯ ಸಹಾಯಕ ಇಂಜಿನಿಯರ್ ನಿತಿನ್ ಕುಮಾರ್ ಕೋಟೆ,ಬಿಗ್ ಬ್ರದರ್ ಲ್ಯಾನ್ಸಿ ಪಿಂಟೋ,ಜೋಯೇಲ್ ಮೆಂಡೋನ್ಸ, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಗೌರವ ಸಲಹೆಗಾರ ಎಂ.ಸಂಜೀವ ಶೆಟ್ಟಿ ಮುಗೆರೋಡಿಯವರನ್ನು ಸನ್ಮಾನಿಸಲಾಯಿತು.ಅಯೋಧ್ಯೆಯ ಕರಸೇವೆಯಲ್ಲಿ ಭಾಗಿಯಾದ ಸಮಿತಿಯ ಸದಸ್ಯರಿಗೆ ಗೌರವ ಸಲ್ಲಿಸಲಾಯಿತು.

ಪ್ರಕಾಶ್ ಮಹಾದೇವನ್ ಮತ್ತು ತಂಡದವರಿಂದ ಆರ್ಕೆಸ್ಟ್ರಾ ನಡೆಯಿತು.ಪ್ರಸಿದ್ದ ಕುಣಿತಾ ಭಜನೆ ತಂಡದೊಂದಿಗೆ ಶ್ರೀಕೃಷ್ಣನ ಮೆರವಣಿಗೆ ನಡೆಯಿತು.ಮಕ್ಕಳಿಗೆ,ಪುರುಷರಿಗೆ,ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ದೆಗಳು ನಡೆದವು.ಶ್ರೀ ಕೃಷ್ಣ ವೆರಷ ಸ್ಪರ್ದೆ ಎಲ್ಲರ ಅಕರ್ಷಣೆಯಾಗಿತ್ತು.ಹಗ್ಗಜಗ್ಗಾಟ,ತ್ರೋಬಾಲ್,ಸ್ಲೋ ಸೈಕಲ್ ಬ್ಯಾಲೆನ್ಸ್,ಕ್ರಾಸ್ ಕಂಟ್ರಿ, ಗೋವಿಂದ ಸ್ಪರ್ದೆ,ಬೈಕ್ ರೇಸ್ ಎಲ್ಲರ ಗಮನ ಸೆಳೆಯಿತು

ಸಮಿತಿಯ ಸ್ಥಾಪಕ ಅಧ್ಯಕ್ಷ ಕೆ.ಪ್ರಭಾಕರ ಶೆಟ್ಟಿ, ಗೌರವಾಧ್ಯಕ್ಷ ಬಿ‌.ಪದ್ಮನಾಭ ಸುವರ್ಣ,ಅಧ್ಯಕ್ಷ ಪ್ರಶಾಂತ್ ಎಂ ಪಾರೆಂಕಿ,ಪದಾಧಿಕಾರಿಗಳಾದ ಸಚಿನ್ ಸುವರ್ಣ ಕೊಡ್ಲಕ್ಕೆ, ನಾರಾಯಣ ಪೂಜಾರಿ,ಶಂಕರ್ ಶೆಟ್ಟಿ ಸೋಣಂದೂರು,ಸುಕೇಶ್ ಕುಮಾರ್ ಸಾಲುಮರ,ಸಚಿನ್ ಆಲ್ಮುಡ ಹಾಗೂ ಸಮಿತಿ ಸದಸ್ಯರು ಸಹಕರಿಸಿದರು.

Related posts

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya

ಉಜಿರೆ: ಯಕ್ಷಬಿಂದು ಕಲಾರಾಧನಾ ಪ್ರತಿಷ್ಠಾನದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯಿಂದ ನಗರ ಸಂಕೀರ್ತನೆ, ರಾಮತಾರಕ ಮಂತ್ರ

Suddi Udaya

ಅರಸಿನಮಕ್ಕಿ: ಅರಿಕೇಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಷ್ಣು ಸಹಸ್ರನಾಮ ಪಠಣ ಪ್ರಾರಂಭ

Suddi Udaya

ಪುಷ್ಪಗಿರಿ ತಂಡದಿಂದ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯರಿಗೆ ಅಭಿನಂದನೆ

Suddi Udaya

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya
error: Content is protected !!