30.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಮಡಂತ್ಯಾರು: ಶ್ರೀಕೃಷ್ಣ ಜನ್ನಾಷ್ಟಮಿ ಸಮಿತಿಯಿಂದ 35 ನೇ ವರ್ಷದ ಮೊಸರು ಕುಡಿಕೆ ಉತ್ಸವ

ಮಡಂತ್ಯಾರು: ಶ್ರೀಕೃಷ್ಣ ಜನ್ನಾಷ್ಟಮಿ ಸಮಿತಿಯಿಂದ 35 ನೇ ವರ್ಷದ ಮೊಸರು ಕುಡಿಕೆ ಉತ್ಸವ ಗಣಪತಿ ಮಂಟಪ ಮಡಂತ್ಯಾರುವಿನಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಪಾರೆಂಕಿ ಮಾಜಿ ಆಡಳಿತ ಮೊಕ್ತೇಶರ ಎಂ.ವಿಠಲ ಶೆಟ್ಟಿ ನೇರವೇರಿಸಿ ಶುಭ ಕೋರಿದರು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಹಿಸಿದ್ದರು.ಕಾರ್ಯಕ್ರಮದಲ್ಲಿ ಯುವ ಗೌಡರ ಸಂಘದ ತಾಲೂಕು ಅಧ್ಯಕ್ಷ ಚಂದ್ರಕಾಂತ್ ಗೌಡ ನಿಡ್ಡಾಜೆ,ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷ ನಿತ್ಯಾನಂದ ಹೆಗ್ಡೆ,
ಉಪ್ಪಿನಂಗಡಿ‌ ಮೆಸ್ಕಾಂ ಇಲಾಖೆಯ ಸಹಾಯಕ ಇಂಜಿನಿಯರ್ ನಿತಿನ್ ಕುಮಾರ್ ಕೋಟೆ,ಬಿಗ್ ಬ್ರದರ್ ಲ್ಯಾನ್ಸಿ ಪಿಂಟೋ,ಜೋಯೇಲ್ ಮೆಂಡೋನ್ಸ, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಗೌರವ ಸಲಹೆಗಾರ ಎಂ.ಸಂಜೀವ ಶೆಟ್ಟಿ ಮುಗೆರೋಡಿಯವರನ್ನು ಸನ್ಮಾನಿಸಲಾಯಿತು.ಅಯೋಧ್ಯೆಯ ಕರಸೇವೆಯಲ್ಲಿ ಭಾಗಿಯಾದ ಸಮಿತಿಯ ಸದಸ್ಯರಿಗೆ ಗೌರವ ಸಲ್ಲಿಸಲಾಯಿತು.

ಪ್ರಕಾಶ್ ಮಹಾದೇವನ್ ಮತ್ತು ತಂಡದವರಿಂದ ಆರ್ಕೆಸ್ಟ್ರಾ ನಡೆಯಿತು.ಪ್ರಸಿದ್ದ ಕುಣಿತಾ ಭಜನೆ ತಂಡದೊಂದಿಗೆ ಶ್ರೀಕೃಷ್ಣನ ಮೆರವಣಿಗೆ ನಡೆಯಿತು.ಮಕ್ಕಳಿಗೆ,ಪುರುಷರಿಗೆ,ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ದೆಗಳು ನಡೆದವು.ಶ್ರೀ ಕೃಷ್ಣ ವೆರಷ ಸ್ಪರ್ದೆ ಎಲ್ಲರ ಅಕರ್ಷಣೆಯಾಗಿತ್ತು.ಹಗ್ಗಜಗ್ಗಾಟ,ತ್ರೋಬಾಲ್,ಸ್ಲೋ ಸೈಕಲ್ ಬ್ಯಾಲೆನ್ಸ್,ಕ್ರಾಸ್ ಕಂಟ್ರಿ, ಗೋವಿಂದ ಸ್ಪರ್ದೆ,ಬೈಕ್ ರೇಸ್ ಎಲ್ಲರ ಗಮನ ಸೆಳೆಯಿತು

ಸಮಿತಿಯ ಸ್ಥಾಪಕ ಅಧ್ಯಕ್ಷ ಕೆ.ಪ್ರಭಾಕರ ಶೆಟ್ಟಿ, ಗೌರವಾಧ್ಯಕ್ಷ ಬಿ‌.ಪದ್ಮನಾಭ ಸುವರ್ಣ,ಅಧ್ಯಕ್ಷ ಪ್ರಶಾಂತ್ ಎಂ ಪಾರೆಂಕಿ,ಪದಾಧಿಕಾರಿಗಳಾದ ಸಚಿನ್ ಸುವರ್ಣ ಕೊಡ್ಲಕ್ಕೆ, ನಾರಾಯಣ ಪೂಜಾರಿ,ಶಂಕರ್ ಶೆಟ್ಟಿ ಸೋಣಂದೂರು,ಸುಕೇಶ್ ಕುಮಾರ್ ಸಾಲುಮರ,ಸಚಿನ್ ಆಲ್ಮುಡ ಹಾಗೂ ಸಮಿತಿ ಸದಸ್ಯರು ಸಹಕರಿಸಿದರು.

Related posts

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಆರಾಧನಾ ಮಹೋತ್ಸವದಲ್ಲಿ ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ ಹೆಗ್ಡೆ ದಂಪತಿಗೆ ಗೌರವಾರ್ಪಣೆ

Suddi Udaya

ಏ.19: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಆರಾಧಕರ ಸಭೆ

Suddi Udaya

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

Suddi Udaya

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

Suddi Udaya

ವೇಣೂರು: ಭ| ಬಾಹುಬಲಿಸ್ವಾಮಿ ಮೂರ್ತಿಗೆ ಕೊನೆಯ ಮಹಾಮಸ್ತಕಾಭಿಷೇಕ

Suddi Udaya
error: Content is protected !!