25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಉಜಿರೆ ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ ಹೊಂದಿದ್ದ ಡಾ. ಶ್ರೀಧರ ಭಟ್ ರವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ಕ್ಷೇತ್ರ ಸೌತಡ್ಕದ ಮಾಜಿ ವ್ಯವಸ್ಥಾಪನ ಸಮಿತಿ

ಹಿಂದೆ ಸೌತಡ್ಕ ಕ್ಷೇತ್ರದ ಇತಿಹಾಸ ಕಿರು ಪರಿಚಯ ಶ್ರೀ ಕ್ಷೇತ್ರ ಸೌತಡ್ಕ ಕೃತಿ ಬಿಡುಗಡೆಗೊಳಿಸಿದ ಚಿತ್ರ

ಕೊಕ್ಕಡ: ಉಜಿರೆ ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಶ್ರೀಧರ ಭಟ್ ರವರು 2021-24 ನೇ ಸೌತಡ್ಕ ದೇವಳದ ವ್ಯವಸ್ಥಾಪನಾ ಸಮಿತಿಯ ಅವಧಿಯಲ್ಲಿ ಹೊರ ತಂದಿರುವ ಶ್ರೀ ಕ್ಷೇತ್ರ ಸೌತಡ್ಕ. ನೆಲೆ -ಹಿನ್ನೆಲೆ ಮತ್ತು ಭಕ್ತಿ ಸ್ತೋತ್ರಗಳು. ಎನ್ನುವ ಕೃತಿಗೆ ಸಂಪಾದಕರಾಗಿ ಸೇವೆ ಸಲ್ಲಿಸಿರುತ್ತಾರೆ. ಇವರು ಒಂದು ದಶಕದ ಹಿಂದೆ ಬೆಳ್ತಂಗಡಿ ತಾಲೂಕಿನ ದೇವಾಲಯಗಳ ಕಿರು ಅಧ್ಯಯನವನ್ನು ಸೌತಡ್ಕ ಗಣಪತಿ ದೇವರಿಗೆ ಪೂಜೆಯೊಂದಿಗೆ ಪ್ರಾರಂಭಿಸಿದರು. ಅಂದು ಪೂಜೆ ಮಾಡುತ್ತಿದ್ದ ಶ್ರೀ ಸತ್ಯ ಪ್ರಿಯ ಕಲ್ಲೂರಾಯರು ಎಲ್ಲರೂ ತಮ್ಮ ಕೆಲಸ ಪ್ರಾರಂಭಿಸುವಾಗ ದೇವರಲ್ಲಿ ಪ್ರಾರ್ಥನೆ ಮಾಡುತ್ತಾರೆ. ಆದರೆ ನೀವು ದೇವರದ್ದೇ ಕೆಲಸವನ್ನು ಮಾಡುತ್ತಿದ್ದೀರಿ, ನಿಮಗೆ ದೇವರ ಅನುಗ್ರಹ ದೊರೆಯಲಿ ಎಂದು ಪ್ರಾರ್ಥಿಸಿ ಆಶೀರ್ವಾದ ಮಾಡಿದ್ದರು. ಅಂತೆಯೇ ಇವರು ಹಿಂದೆ ಸೌತಡ್ಕ ಕ್ಷೇತ್ರದ ಇತಿಹಾಸ ಕಿರು ಪರಿಚಯ ಕೃತಿಯನ್ನು ಬರೆದು ಬಿಡುಗಡೆ ಗೊಳಿಸಿದ್ದು, ಇವರು ಅಂದು ಮಾಡಿದ ಸೇವೆಗೆ ಇಂದು ಶಿಕ್ಷಣ ಕ್ಷೇತ್ರದಲ್ಲಿ ಪ್ರೊಫೆಸರ್ ಆಗಿ ಪದೋನ್ನತಿ ಹೊಂದಿದ್ದು ಇವರಿಗೆ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನಿಕಟ ಪೂರ್ವ ವ್ಯವಸ್ಥಾಪನ ಸಮಿತಿಯವರು ಅಭಿನಂದನೆ ಸಲ್ಲಿಸಿರುತ್ತಾರೆ.


Related posts

ಯಕ್ಷ ಸಂಭ್ರಮ- 2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬುರುಡೆ ಚಿನ್ನಯ್ಯನ ಎರಡನೇ ಪತ್ನಿ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಹಾಜರು

Suddi Udaya

ನಾರಾವಿ ಮಾಂಡೋವಿ ಮೋಟಾರ್‍ಸ್ ಶೋರೂಮ್ ನಲ್ಲಿ ಡಾಜ್ಲಿಂಗ್‌ ನ್ಯೂ ಡಿಜೈರ್ ಕಾರು ಮಾರುಕಟ್ಟೆಗೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya
error: Content is protected !!