32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಯ್ಯೂರು ಸ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

ಕೊಯ್ಯೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು ದೇವಸ್ಥಾನ ಇದರ ಹಳೆ ವಿದ್ಯಾರ್ಥಿ ಸಂಘಕ್ಕೆ ಹೊಸ ಪದಾಧಿಕಾರಿಗಳ ಆಯ್ಕೆಯು ಆ. 26 ರಂದು ನಡೆಯಿತು.

ಗೌರವ ಸಲಹೆಗಾರರಾಗಿ ಅಶೋಕ್ ಭಟ್ ಅಗ್ರಸಾಲೆ, ಅನಂತಕೃಷ್ಣ ಭಟ್, ಡೀಕಯ್ಯ ಪೂಜಾರಿ, ಶ್ರೀಮತಿ ಶ್ಯಾಮಲಾ ಮುಖ್ಯೋಪಾಧ್ಯಾಯರು, ನವೀನ್ ಕುಮಾರ್ ವಾದ್ಯಕೋಡಿ, ಅಧ್ಯಕ್ಷರಾಗಿ ಚಂದ್ರಶೇಖರ ಮಾವಿನಕಟ್ಟೆ, ಉಪಾಧ್ಯಕ್ಷರಾಗಿ ನೋಣಯ್ಯ ಪೂಜಾರಿ, ಅದಿತಿ ಹೇಮಲ್ಕೆ, ಪ್ರಧಾನ ಕಾರ್ಯದರ್ಶಿಯಾಗಿ ವಿನಾಯಕ ಬೆದ್ರಲ್ಕೆ, ಜೊತೆ ಕಾರ್ಯದರ್ಶಿಗಳಾಗಿ ದೀಕ್ಷಿತ್ ಆರಂತೊಟ್ಟು,
ರವಿಚಂದ್ರ , ಕೋಶಾಧಿಕಾರಿಯಾಗಿ ಸದಾನಂದ ಗೌಡ ಅಡೆಂಕಿಲೊಟ್ಟು ಆಯ್ಕೆಯಾಗಿದ್ದಾರೆ.

ಸಭೆಯಲ್ಲಿ ಉಪಸ್ಥಿತರಿದ್ದ ಹಿರಿಯ ವಿದ್ಯಾರ್ಥಿಗಳನ್ನು ಸಂಘದ ಸಕ್ರಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುಧಾಕರ ದೇವಾಡಿಗ ವಹಿಸಿದ್ದರು. ವೇದಿಕೆಯಲ್ಲಿ ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನವೀನ್ ಕುಮಾರ್ ವಾದ್ಯಕೋಡಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಂತಕೃಷ್ಣ ಭಟ್ಟ ಹಾಗೂ ಎಸ್.ಡಿ.,ಎಮ್.ಸಿ ಉಪಾಧ್ಯಕ್ಷೆ ಶ್ರೀಮತಿ ಜಯಂತಿ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಮಾಜಿ ಕಾರ್ಯದರ್ಶಿ ಕೇಶವ ಗೌಡ ,ಗ್ರಾ.ಪಂ.ಸದಸ್ಯೆ ಶ್ರೀಮತಿ ವಿಶಾಲಕ್ಷಿ ಉಪಸ್ಥಿತರಿದ್ದರು.

ಶಿಕ್ಷಕ ಸೀತಾರಾಮ ಸ್ವಾಗತಿಸಿದರು ಮತ್ತು ಶಿಕ್ಷಕಿ ಶ್ರೀಮತಿ ಚೆನ್ನಮ್ಮ ನಿರೂಪಿಸಿ ವಂದಿಸಿದರು.

Related posts

ಕಳೆದುಹೋದ ಪರ್ಸ ನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಶಿಶಿಲದ ಕೊರಗಪ್ಪ ಗೌಡ

Suddi Udaya

ಆರಂಬೋಡಿ : ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ ಮತ್ತು ಭಿತ್ತಿಪತ್ರಗಳ ಅನಾವರಣ

Suddi Udaya

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಸುರ್ಯ ದೇವಸ್ಥಾನದ ಆನುವಂಶಿಕ ಆಡಳಿತಮೊಕ್ತೇಸರಾಗಿ ಡಾ. ಸತೀಶ್ಚಂದ್ರ ಸುರ್ಯಗುತ್ತು ನೇಮಕ

Suddi Udaya

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಾಮುಂಡೇಶ್ವರಿ ಅಮ್ಮನವರಿಗೆ ಬ್ರಹ್ಮಕಲಶಾಭಿಷೇಕ

Suddi Udaya
error: Content is protected !!