25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಯ್ಯೂರು ಸ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

ಕೊಯ್ಯೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು ದೇವಸ್ಥಾನ ಇದರ ಹಳೆ ವಿದ್ಯಾರ್ಥಿ ಸಂಘಕ್ಕೆ ಹೊಸ ಪದಾಧಿಕಾರಿಗಳ ಆಯ್ಕೆಯು ಆ. 26 ರಂದು ನಡೆಯಿತು.

ಗೌರವ ಸಲಹೆಗಾರರಾಗಿ ಅಶೋಕ್ ಭಟ್ ಅಗ್ರಸಾಲೆ, ಅನಂತಕೃಷ್ಣ ಭಟ್, ಡೀಕಯ್ಯ ಪೂಜಾರಿ, ಶ್ರೀಮತಿ ಶ್ಯಾಮಲಾ ಮುಖ್ಯೋಪಾಧ್ಯಾಯರು, ನವೀನ್ ಕುಮಾರ್ ವಾದ್ಯಕೋಡಿ, ಅಧ್ಯಕ್ಷರಾಗಿ ಚಂದ್ರಶೇಖರ ಮಾವಿನಕಟ್ಟೆ, ಉಪಾಧ್ಯಕ್ಷರಾಗಿ ನೋಣಯ್ಯ ಪೂಜಾರಿ, ಅದಿತಿ ಹೇಮಲ್ಕೆ, ಪ್ರಧಾನ ಕಾರ್ಯದರ್ಶಿಯಾಗಿ ವಿನಾಯಕ ಬೆದ್ರಲ್ಕೆ, ಜೊತೆ ಕಾರ್ಯದರ್ಶಿಗಳಾಗಿ ದೀಕ್ಷಿತ್ ಆರಂತೊಟ್ಟು,
ರವಿಚಂದ್ರ , ಕೋಶಾಧಿಕಾರಿಯಾಗಿ ಸದಾನಂದ ಗೌಡ ಅಡೆಂಕಿಲೊಟ್ಟು ಆಯ್ಕೆಯಾಗಿದ್ದಾರೆ.

ಸಭೆಯಲ್ಲಿ ಉಪಸ್ಥಿತರಿದ್ದ ಹಿರಿಯ ವಿದ್ಯಾರ್ಥಿಗಳನ್ನು ಸಂಘದ ಸಕ್ರಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುಧಾಕರ ದೇವಾಡಿಗ ವಹಿಸಿದ್ದರು. ವೇದಿಕೆಯಲ್ಲಿ ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನವೀನ್ ಕುಮಾರ್ ವಾದ್ಯಕೋಡಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಂತಕೃಷ್ಣ ಭಟ್ಟ ಹಾಗೂ ಎಸ್.ಡಿ.,ಎಮ್.ಸಿ ಉಪಾಧ್ಯಕ್ಷೆ ಶ್ರೀಮತಿ ಜಯಂತಿ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಮಾಜಿ ಕಾರ್ಯದರ್ಶಿ ಕೇಶವ ಗೌಡ ,ಗ್ರಾ.ಪಂ.ಸದಸ್ಯೆ ಶ್ರೀಮತಿ ವಿಶಾಲಕ್ಷಿ ಉಪಸ್ಥಿತರಿದ್ದರು.

ಶಿಕ್ಷಕ ಸೀತಾರಾಮ ಸ್ವಾಗತಿಸಿದರು ಮತ್ತು ಶಿಕ್ಷಕಿ ಶ್ರೀಮತಿ ಚೆನ್ನಮ್ಮ ನಿರೂಪಿಸಿ ವಂದಿಸಿದರು.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಅಳದಂಗಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಶಿಶಿಲ : 9 ವರ್ಷದ ಬಾಲಕ ಅಶ್ವಿನ್ ನಿಧನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೈರ್ ವಿತರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ

Suddi Udaya

ಜು.17: ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya
error: Content is protected !!