38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ನೇತ್ರಾವತಿ ವಲಯ, ದ.ಕ ಜಿಲ್ಲೆ ಇದರ ವತಿಯಿಂದ ನಮ್ಮ ಮನೆ ಹವ್ಯಕ ಭವನ ಗುರುವಾಯನಕೆರೆಯಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನಾ ಕಾರ್ಯಕ್ರಮ ಆ.25ರಂದು ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಶಾಖೆಯ ಮುಖ್ಯ ಶಿಕ್ಷಕ ಡಾ.ಗೋವಿಂದ ಪ್ರಸಾದ್ ಕಜೆ ರವರು ವಹಿಸಿ, ಜೀವನದಲ್ಲಿ ಯೋಗದ ಅವಶ್ಯಕತೆ ಬಗ್ಗೆ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕಿನ ಶಾಖೆಯ ಮುಖ್ಯ ಶಿಕ್ಷಕ ಕೃಷ್ಣಾನಂದ ಪ್ರಾಸ್ತಾವಿಕವಾಗಿ ಮಾತನಾಡಿ ಎಸ್.ಪಿ.ವೈ.ಎಸ್.ಎಸ್ ಸಮಿತಿಯ ಪರಿಚಯವನ್ನು ಮಾಡಿದರು. ನಮ್ಮ ಮನೆ ಹವ್ಯಕ ಭವನದ ಅಧ್ಯಕ್ಷ ಕೃಷ್ಣ ಭಟ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.
ಸುಮಾರು 100ಕ್ಕೂ ಮಿಕ್ಕಿ ಯೋಗಾಸಕ್ತ ಬಂಧುಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಅಶ್ವಿನಿ ಪ್ರಾರ್ಥಿಸಿ, ಪ್ರೇಮಲತಾ ಗಣೇಶ್ ನಿರೂಪಿಸಿ, ಆಶಾ ಸ್ವಾಗತಿಸಿ, ಪ್ರಜ್ಞಾ ವಂದಿಸಿದರು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನ ಉದ್ಘಾಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ಕಾರ್ಯಕ್ರಮ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರತಿಭಾ ಸಂಭ್ರಮ

Suddi Udaya

ಮುಳಿಯದಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಭ್ರಮ

Suddi Udaya

ಕೊಕ್ಕಡ ಗ್ರಾ.ಪಂ. ಸಂಗಮ ಸಂಜೀವಿನಿ ಒಕ್ಕೂಟದಿಂದ ಚಿಕಿತ್ಸಾ ನೆರವು

Suddi Udaya
error: Content is protected !!