September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ನೇತ್ರಾವತಿ ವಲಯ, ದ.ಕ ಜಿಲ್ಲೆ ಇದರ ವತಿಯಿಂದ ನಮ್ಮ ಮನೆ ಹವ್ಯಕ ಭವನ ಗುರುವಾಯನಕೆರೆಯಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನಾ ಕಾರ್ಯಕ್ರಮ ಆ.25ರಂದು ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಶಾಖೆಯ ಮುಖ್ಯ ಶಿಕ್ಷಕ ಡಾ.ಗೋವಿಂದ ಪ್ರಸಾದ್ ಕಜೆ ರವರು ವಹಿಸಿ, ಜೀವನದಲ್ಲಿ ಯೋಗದ ಅವಶ್ಯಕತೆ ಬಗ್ಗೆ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕಿನ ಶಾಖೆಯ ಮುಖ್ಯ ಶಿಕ್ಷಕ ಕೃಷ್ಣಾನಂದ ಪ್ರಾಸ್ತಾವಿಕವಾಗಿ ಮಾತನಾಡಿ ಎಸ್.ಪಿ.ವೈ.ಎಸ್.ಎಸ್ ಸಮಿತಿಯ ಪರಿಚಯವನ್ನು ಮಾಡಿದರು. ನಮ್ಮ ಮನೆ ಹವ್ಯಕ ಭವನದ ಅಧ್ಯಕ್ಷ ಕೃಷ್ಣ ಭಟ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.
ಸುಮಾರು 100ಕ್ಕೂ ಮಿಕ್ಕಿ ಯೋಗಾಸಕ್ತ ಬಂಧುಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಅಶ್ವಿನಿ ಪ್ರಾರ್ಥಿಸಿ, ಪ್ರೇಮಲತಾ ಗಣೇಶ್ ನಿರೂಪಿಸಿ, ಆಶಾ ಸ್ವಾಗತಿಸಿ, ಪ್ರಜ್ಞಾ ವಂದಿಸಿದರು.

Related posts

ಸಿಯೋನ್ ಆಶ್ರಮ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರ

Suddi Udaya

ಪದ್ಮುಂಜ: ನೀಲಯ ನಲ್ಕೆ ನಿಧನ

Suddi Udaya

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ.

Suddi Udaya

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಕರ್ಷಕ ಗಿಫ್ಟ್ ಗಳು

Suddi Udaya

ಎ.13ರ ಒಳಗೆ ಪೊಲೀಸ್ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಲು ಸೂಚನೆ

Suddi Udaya

ಬಜಿಲ ನಿವಾಸಿ ನಾರಾಯಣ ಗೌಡ ನಿಧನ

Suddi Udaya
error: Content is protected !!