25.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕ

ಮಡಂತ್ಯಾರು: ಶ್ರೀಕೃಷ್ಣ ಜನ್ನಾಷ್ಟಮಿ ಸಮಿತಿಯಿಂದ 35 ನೇ ವರ್ಷದ ಮೊಸರು ಕುಡಿಕೆ ಉತ್ಸವ

ಮಡಂತ್ಯಾರು: ಶ್ರೀಕೃಷ್ಣ ಜನ್ನಾಷ್ಟಮಿ ಸಮಿತಿಯಿಂದ 35 ನೇ ವರ್ಷದ ಮೊಸರು ಕುಡಿಕೆ ಉತ್ಸವ ಗಣಪತಿ ಮಂಟಪ ಮಡಂತ್ಯಾರುವಿನಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಪಾರೆಂಕಿ ಮಾಜಿ ಆಡಳಿತ ಮೊಕ್ತೇಶರ ಎಂ.ವಿಠಲ ಶೆಟ್ಟಿ ನೇರವೇರಿಸಿ ಶುಭ ಕೋರಿದರು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಹಿಸಿದ್ದರು.ಕಾರ್ಯಕ್ರಮದಲ್ಲಿ ಯುವ ಗೌಡರ ಸಂಘದ ತಾಲೂಕು ಅಧ್ಯಕ್ಷ ಚಂದ್ರಕಾಂತ್ ಗೌಡ ನಿಡ್ಡಾಜೆ,ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷ ನಿತ್ಯಾನಂದ ಹೆಗ್ಡೆ,
ಉಪ್ಪಿನಂಗಡಿ‌ ಮೆಸ್ಕಾಂ ಇಲಾಖೆಯ ಸಹಾಯಕ ಇಂಜಿನಿಯರ್ ನಿತಿನ್ ಕುಮಾರ್ ಕೋಟೆ,ಬಿಗ್ ಬ್ರದರ್ ಲ್ಯಾನ್ಸಿ ಪಿಂಟೋ,ಜೋಯೇಲ್ ಮೆಂಡೋನ್ಸ, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಗೌರವ ಸಲಹೆಗಾರ ಎಂ.ಸಂಜೀವ ಶೆಟ್ಟಿ ಮುಗೆರೋಡಿಯವರನ್ನು ಸನ್ಮಾನಿಸಲಾಯಿತು.ಅಯೋಧ್ಯೆಯ ಕರಸೇವೆಯಲ್ಲಿ ಭಾಗಿಯಾದ ಸಮಿತಿಯ ಸದಸ್ಯರಿಗೆ ಗೌರವ ಸಲ್ಲಿಸಲಾಯಿತು.

ಪ್ರಕಾಶ್ ಮಹಾದೇವನ್ ಮತ್ತು ತಂಡದವರಿಂದ ಆರ್ಕೆಸ್ಟ್ರಾ ನಡೆಯಿತು.ಪ್ರಸಿದ್ದ ಕುಣಿತಾ ಭಜನೆ ತಂಡದೊಂದಿಗೆ ಶ್ರೀಕೃಷ್ಣನ ಮೆರವಣಿಗೆ ನಡೆಯಿತು.ಮಕ್ಕಳಿಗೆ,ಪುರುಷರಿಗೆ,ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ದೆಗಳು ನಡೆದವು.ಶ್ರೀ ಕೃಷ್ಣ ವೆರಷ ಸ್ಪರ್ದೆ ಎಲ್ಲರ ಅಕರ್ಷಣೆಯಾಗಿತ್ತು.ಹಗ್ಗಜಗ್ಗಾಟ,ತ್ರೋಬಾಲ್,ಸ್ಲೋ ಸೈಕಲ್ ಬ್ಯಾಲೆನ್ಸ್,ಕ್ರಾಸ್ ಕಂಟ್ರಿ, ಗೋವಿಂದ ಸ್ಪರ್ದೆ,ಬೈಕ್ ರೇಸ್ ಎಲ್ಲರ ಗಮನ ಸೆಳೆಯಿತು

ಸಮಿತಿಯ ಸ್ಥಾಪಕ ಅಧ್ಯಕ್ಷ ಕೆ.ಪ್ರಭಾಕರ ಶೆಟ್ಟಿ, ಗೌರವಾಧ್ಯಕ್ಷ ಬಿ‌.ಪದ್ಮನಾಭ ಸುವರ್ಣ,ಅಧ್ಯಕ್ಷ ಪ್ರಶಾಂತ್ ಎಂ ಪಾರೆಂಕಿ,ಪದಾಧಿಕಾರಿಗಳಾದ ಸಚಿನ್ ಸುವರ್ಣ ಕೊಡ್ಲಕ್ಕೆ, ನಾರಾಯಣ ಪೂಜಾರಿ,ಶಂಕರ್ ಶೆಟ್ಟಿ ಸೋಣಂದೂರು,ಸುಕೇಶ್ ಕುಮಾರ್ ಸಾಲುಮರ,ಸಚಿನ್ ಆಲ್ಮುಡ ಹಾಗೂ ಸಮಿತಿ ಸದಸ್ಯರು ಸಹಕರಿಸಿದರು.

Related posts

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಬಂದಾರು: ಮುಂಡೂರು ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬಳಂಜ ಶಾಲಾ ಶಿಕ್ಷಣ ಚಟುವಟಿಕೆಗಳಿಗಾಗಿ,ಯಕ್ಷಪ್ರಿಯ ಸಮಿತಿಯಿಂದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಕ್ಷಗಾನ “ನಾಗಾರತಿ”:ಅರುವ ಕೊರಗಪ್ಪ ಶೆಟ್ಟಿ,ಲಲಿತಾ ಟೀಚರ್,ಉಸ್ಮಾನ್ ಕೆ ಅವರಿಗೆ ಸನ್ಮಾನ,ವಿವಿಧ ಕ್ಷೇತ್ರದ ಸಾಧಕರಿಗೆ ಗೌರವಾರ್ಪಣೆ:ಸಾವಿರಾರು ಕಲಾಭಿಮಾನಿಗಳಿಂದ ಯಕ್ಷಗಾನ ವಿಕ್ಷಣೆ,ಅಚ್ಚುಕಟ್ಟಾದ ವ್ಯವಸ್ಥೆ,ಸಾರ್ವಜನಿಕ ಅನ್ನಸಂತರ್ಪಣೆ

Suddi Udaya

ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ದೀಪೋತ್ಸವ

Suddi Udaya

ಎ.22: ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ “ಹರಿ ದರ್ಶನ” ಯಕ್ಷಗಾನ ಬಯಲಾಟ

Suddi Udaya
error: Content is protected !!