38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟಿಂಗ್ ಗೈಡಿಂಗ್ ಚಳುವಳಿಯ ಪ್ರಾರಂಭೋತ್ಸವ

ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನಕ್ಕೊಳಪಟ್ಟ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆಯ ಕಬ್, ಬುಲ್ ಬುಲ್, ಸ್ಕೌಟ್ & ಗೈಡ್ ಘಟಕಗಳ ಪ್ರಾರಂಭೋತ್ಸವ ಹಾಗೂ ರೋವರ್ & ರೇಂಜರ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಅದ್ದೂರಿಯಾಗಿ ನಡೆಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ಭಾರತ್ ಸ್ಕೌಟ್ & ಗೈಡ್ಸ್, ಕರ್ನಾಟಕ ಇದರ ಸಹಾಯಕ ರಾಜ್ಯ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ ಇವರು ನೆರವೇರಿಸಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಸ್ಕೌಟಿಂಗ್ ಗೈಡಿಂಗ್ ನ ಪಾತ್ರವನ್ನು ತಿಳಿಸಿದರು.


ಮುಖ್ಯ ಅತಿಥಿಗಳಾಗಿ ಭಾರತ್ ಸ್ಕೌಟ್ ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿಯಾದ ಪ್ರಮೀಳಾ ಕಬ್, ಬುಲ್ ಬುಲ್, ಸ್ಕೌಟ್ & ಗೈಡ್ ದಳಗಳು ಉತ್ತಮವಾಗಿ ಮುಂದುವರೆದು ಕೀರ್ತಿಯನ್ನು ಗಳಿಸಲಿ ಎಂಬುದಾಗಿ ಶುಭಹಾರೈಸಿದರು.
ಇನ್ನೋರ್ವ ಅತಿಥಿಗಳಾದ ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯ ಸಹಾಯಕ ಪ್ರಾಧ್ಯಾಪಕರಾದ ಡಾ. ರವಿ ಎಂ ಎನ್ ಮಾತನಾಡಿ ಜೀವನದಲ್ಲಿ ಮೌಲ್ಯಗಳನ್ನು ರೂಪಿಸುವಲ್ಲಿ ಸ್ಕೌಟಿಂಗ್ ಗೈಡಿಂಗ್ ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆಯ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ಚಂದ್ರಮತಿ ಘಟಕಗಳಿಗೆ ಶುಭಹಾರೈಸಿದರು.


ಸರಸ್ವತಿ ಪ್ರಾಥಮಿಕ ಶಾಲೆಯ ಸಂಯೋಜಕಿ ಶ್ರೀಮತಿ ಶ್ರೀಜಾ ಹಾಗೂ ಮುಂಡಾಜೆ ಪದವಿ ಪೂರ್ವ ಕಾಲೇಜಿನ ಹಿರಿಯ ಉಪನ್ಯಾಸಕಿ ಶ್ರೀಮತಿ ಗೀತಾ ಉಪಸ್ಥಿತರಿದ್ದರು.


ರೇಂಜರ್ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ರೇಂಜರ್ ಲೀಡರ್ ಶ್ರೀಮತಿ ವಸಂತಿ ನಿರೂಪಿಸಿ, ಫ್ಲಾಕ್ ಲೀಡರ್ ಶ್ರೀಮತಿ ಭಾರತಿ ಡಿ ಸ್ವಾಗತಿಸಿ, ಗೈಡ್ ಕ್ಯಾಪ್ಟನ್ ಶ್ರೀಮತಿ ರೇವತಿ ಧನ್ಯವಾದಗೈದರು. ರೋವರ್ ಸ್ಕೌಟ್ ಲೀಡರ್ ಕೃಷ್ಣ ಕಿರಣ್ ಕೆ, ಸ್ಕೌಟ್ ಮಾಸ್ಟರ್ ಬಾಲಕೃಷ್ಣ, ಕಬ್ ಮಾಸ್ಟರ್ ಶ್ರೀಮತಿ ಪ್ರೇಮ ಸಹಕರಿಸಿದರು.

Related posts

ಉಜಿರೆಯಲ್ಲಿ ಅಜಾಗರೂಕತೆಯಿಂದ ಕಾರು ಚಾಲನೆ; ಸ್ಕೂಟರ್ ಗೆ ಡಿಕ್ಕಿ, ಯುವತಿಗೆ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya

ಮೇ 5: ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಶಾಸಕರ ಬಂಧನಕ್ಕೆ ಹೋದ ಪೊಲೀಸರು- ಸಂಜೆಯವರೆಗೆ ಬಿಗ್ ಹೈಡ್ರಾಮ;: ಶಾಸಕ ಹರೀಶ್ ಪೂಂಜರ ಬಂಧನ ಕೈ ಬಿಟ್ಟು ಹಿಂದಿರುಗಿದ ಪೊಲೀಸರು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಬಾರ್ಡಿನ ಸಿಜಿಎಂ ಸುರೇಂದ್ರ ಬಾಬು ಮತ್ತು ದ.ಕ. ಜಿಲ್ಲಾ ನಬಾರ್ಡಿನ ಉಸ್ತುವಾರಿ ಸಂಗೀತ ಕರ್ತ ಭೇಟಿ

Suddi Udaya

ಮೇ 14ರಿಂದ 24ರವರೆಗೆ ಕುಲಶೇಖರ ವೀರನಾರಾಯಣ ದೇವರಿಗೆ ಬ್ರಹ್ಮಕಲಶದ ವೈಭವ : ರೂ. 10 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ: ಪತ್ರಿಕಾಗೋಷ್ಠಿಯಲ್ಲಿ ಮಯೂರ್ ಉಳ್ಳಾಲ್ ಮಾಹಿತಿ

Suddi Udaya
error: Content is protected !!