23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

ಬೆಳ್ತಂಗಡಿ: ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಾವೀರ ಕಾಲೊನಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಅತೀ ಬಡ ಕುಟುಂಬಗಳು ಕಂದಾಯ ದಾಖಲೆಗಳಿಲ್ಲದೆ ಸರಕಾರದ ಯಾವುದೇ ಯೋಜನೆಗಳನ್ನು ಪಡೆಯಲು ಅನರ್ಹರಾಗಿದ್ದು ಈ ಸಮಸ್ಯೆಯ ಬಗ್ಗೆ ಪರಿಶೀಲಿಸಿ ಸದ್ರಿ ಕುಟುಂಬಗಳಿಗೆ ಕಂದಾಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಿ ಕೊಕ್ಕಡ ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡ, ರವರು ಕಂದಾಯ ಸಚಿವ ಕೃಷ್ಣಭೈರೇ ಗೌಡರಿಗೆ ಮನವಿಯನ್ನು ಸಲ್ಲಿಸಿದ್ದರು.


ಈ ಮನವಿಗೆ ಸ್ಪಂದಿಸಿದ ಸಚಿವರ ಸೂಚನೆಯಂತೆ ಬೆಂಗಳೂರಿನ ಕಂದಾಯ ಸಚಿವರ ವಿಶೇಷ ಕರ್ತವ್ಯಾಧಿಕಾರಿಯವರು ದ.ಕ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ಸದ್ರಿ ವಿಚಾರದ ಬಗ್ಗೆ ತುರ್ತಾಗಿ ಪರಿಶೀಲಿಸಿ ನಿಯಾಮನುಸಾರ ಅಗತ್ಯ ಕ್ರಮಕೈಗೊಂಡು, ಕೈಗೊಂಡ ಕ್ರಮದ ಬಗ್ಗೆ ಸಂಬಂಧಪಟ್ಟವರಿಗೆ ಸೂಕ್ತ ಮಾಹಿತಿ ಹಿಂಬರಹ ನೀಡುವಂತೆ ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಯವರು ಬೆಳ್ತಂಗಡಿ ತಹಶೀಲ್ದಾರರು ಹಾಗೂ ತಾ.ಪಂ. ಕಾರ್ಯನಿರ್ವಹಣಾಧಿಕಾರಿಯವರಿಗೆ ಆದೇಶ ನೀಡಿ, ಈ ವಿಚಾರದ ಬಗ್ಗೆ ತುರ್ತಾಗಿ ಪರಿಶೀಲಿಸಿ ನಿಯಾಮನುಸಾರ ಅಗತ್ಯ ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ.

Related posts

ಪುದುವೆಟ್ಟು ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಲಕ್ಷ್ಮೀ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನೂರಾರು ಕಾರ್ಯಕರ್ತರು

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ, ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಬಾಂಜಾರುಮಲೆಯ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದ ಆಸ್ತಿ ಉಳಿಸಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Suddi Udaya

ಬೈಕ್ ಅಪಘಾತ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅಶೋಕ ಕುಮಾರ್ ನಿಧನ

Suddi Udaya
error: Content is protected !!