September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೆ. 3: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ

ಬೆಳ್ತಂಗಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ ಸಮಾರಂಭವು ಸೆ. 03 ರಂದು ಬೆಳಗ್ಗೆ 11 ಗಂಟೆಗೆ ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದಲ್ಲಿ ಜರುಗಲಿದೆ.

ದಕ್ಷಿಣದ ಅಯೋಧ್ಯೆ ಎಂದೇ ಖ್ಯಾತಿ ಪಡೆದ ಶ್ರೀ ರಾಮ ಕ್ಷೇತ್ರದ ನಿರ್ಮಾತೃ ಶ್ರೀ ಶ್ರೀ ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸಂಕಲ್ಪದಂತೆ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರು ಒಂಬತ್ತು ಶಾಖಾ ಮಠಗಳನ್ನು ಸ್ಥಾಪಿಸಿ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ. ತಮ್ಮ ಪಟ್ಟಾಭಿಷೇಕದ ದಶಮಾನೋತ್ಸವ ಸಂದರ್ಭದಲ್ಲಿ ರಾಷ್ಟ್ರೀಯ ಧರ್ಮ ಸಂಸದ್ ಮೂಲಕ ಯಶಸ್ವಿ ಕಾರ್ಯಕ್ರಮ ಆಯೋಜಿಸಿ ಜನಮಾನಸದಲ್ಲಿ ಉಳಿಯುವಂತೆ ಮಾಡಿದರು. ಕಳೆದ 4 ವರ್ಷಗಳಿಂದ ಶ್ರೀ ಗುರುದೇವ ಮಠದಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿದ್ದು. ಈ ವರ್ಷ ಭಟ್ಕಳ ತಾಲೂಕಿನ ಕರಿಕಲ್ ಶಾಖಾ ಮಠದಲ್ಲಿ ಕಳೆದ ಜು 21 ರಿಂದ ಆ. 30 ರವರೆಗೆ, 41 ದಿನಗಳ ಚಾತುರ್ಮಾಸ್ಯ ವ್ರತಾಚಾರಣೆ ಕೈಗೊಂಡಿರುತ್ತಾರೆ.

ಚಾತುರ್ಮಸ್ಯ ವ್ರತಾಚಾರಣೆ ಸಂದರ್ಭದಲ್ಲಿ ಯಕ್ಷಗಾನ, ತಾಳಮದ್ದಲೆ, ನಾಟಕ, ಭಾಗವತ ಸಪ್ತಾಹ ಸೇರಿದಂತೆ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು. ಜನಪ್ರತಿನಿಧಿಗಳು, ಸ್ವಾಮೀಜಿಯವರ ಶಿಷ್ಯವೃಂದದವರು, ದ.ಕ., ಉಡುಪಿ, ಉತ್ತರ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಯಿಂದ ಭಕ್ತರು ಭೇಟಿ ನೀಡಿ ಗುರುಗಳಿಂದ ಆಶೀರ್ವಾದ ಪಡೆದುಕೊಂಡರು. ಸೆ 03 ನೇ ಮಂಗಳವಾರದಂದು ನಡೆಯುವ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ ಸಮಾರಂಭ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಸಚಿವರು, ಶಾಸಕರು, ಸಂಸದರು, ಮಾಜಿ ಶಾಸಕರು, ಮಾಜಿ ಸಂಸದರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಮಠದ ಟ್ರಸ್ಟಿಗಳಾದ ತುಕಾರಾಮ್ ಸಾಲಿಯಾನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ

Suddi Udaya

ರಾಜ್ಯ ಮಟ್ಟದ ಫಾಸ್ಟ್ ಫೈವ್ ಪುರುಷರ ಹಾಗೂ ಮಹಿಳೆಯರ ನೆಟ್‌ಬಾಲ್ ಚಾಂಪಿಯನ್‌ಶಿಪ್‌: ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳಿಗೆ ಅವಳಿ ಚಾಂಪಿಯನ್ಸ್ ಪ್ರಶಸ್ತಿ

Suddi Udaya

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :

Suddi Udaya
error: Content is protected !!