July 23, 2026
Uncategorized

ಉಜಿರೆ ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ ಹೊಂದಿದ್ದ ಡಾ. ಶ್ರೀಧರ ಭಟ್ ರವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ಕ್ಷೇತ್ರ ಸೌತಡ್ಕದ ಮಾಜಿ ವ್ಯವಸ್ಥಾಪನ ಸಮಿತಿ

ಹಿಂದೆ ಸೌತಡ್ಕ ಕ್ಷೇತ್ರದ ಇತಿಹಾಸ ಕಿರು ಪರಿಚಯ ಶ್ರೀ ಕ್ಷೇತ್ರ ಸೌತಡ್ಕ ಕೃತಿ ಬಿಡುಗಡೆಗೊಳಿಸಿದ ಚಿತ್ರ

ಕೊಕ್ಕಡ: ಉಜಿರೆ ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಶ್ರೀಧರ ಭಟ್ ರವರು 2021-24 ನೇ ಸೌತಡ್ಕ ದೇವಳದ ವ್ಯವಸ್ಥಾಪನಾ ಸಮಿತಿಯ ಅವಧಿಯಲ್ಲಿ ಹೊರ ತಂದಿರುವ ಶ್ರೀ ಕ್ಷೇತ್ರ ಸೌತಡ್ಕ. ನೆಲೆ -ಹಿನ್ನೆಲೆ ಮತ್ತು ಭಕ್ತಿ ಸ್ತೋತ್ರಗಳು. ಎನ್ನುವ ಕೃತಿಗೆ ಸಂಪಾದಕರಾಗಿ ಸೇವೆ ಸಲ್ಲಿಸಿರುತ್ತಾರೆ. ಇವರು ಒಂದು ದಶಕದ ಹಿಂದೆ ಬೆಳ್ತಂಗಡಿ ತಾಲೂಕಿನ ದೇವಾಲಯಗಳ ಕಿರು ಅಧ್ಯಯನವನ್ನು ಸೌತಡ್ಕ ಗಣಪತಿ ದೇವರಿಗೆ ಪೂಜೆಯೊಂದಿಗೆ ಪ್ರಾರಂಭಿಸಿದರು. ಅಂದು ಪೂಜೆ ಮಾಡುತ್ತಿದ್ದ ಶ್ರೀ ಸತ್ಯ ಪ್ರಿಯ ಕಲ್ಲೂರಾಯರು ಎಲ್ಲರೂ ತಮ್ಮ ಕೆಲಸ ಪ್ರಾರಂಭಿಸುವಾಗ ದೇವರಲ್ಲಿ ಪ್ರಾರ್ಥನೆ ಮಾಡುತ್ತಾರೆ. ಆದರೆ ನೀವು ದೇವರದ್ದೇ ಕೆಲಸವನ್ನು ಮಾಡುತ್ತಿದ್ದೀರಿ, ನಿಮಗೆ ದೇವರ ಅನುಗ್ರಹ ದೊರೆಯಲಿ ಎಂದು ಪ್ರಾರ್ಥಿಸಿ ಆಶೀರ್ವಾದ ಮಾಡಿದ್ದರು. ಅಂತೆಯೇ ಇವರು ಹಿಂದೆ ಸೌತಡ್ಕ ಕ್ಷೇತ್ರದ ಇತಿಹಾಸ ಕಿರು ಪರಿಚಯ ಕೃತಿಯನ್ನು ಬರೆದು ಬಿಡುಗಡೆ ಗೊಳಿಸಿದ್ದು, ಇವರು ಅಂದು ಮಾಡಿದ ಸೇವೆಗೆ ಇಂದು ಶಿಕ್ಷಣ ಕ್ಷೇತ್ರದಲ್ಲಿ ಪ್ರೊಫೆಸರ್ ಆಗಿ ಪದೋನ್ನತಿ ಹೊಂದಿದ್ದು ಇವರಿಗೆ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನಿಕಟ ಪೂರ್ವ ವ್ಯವಸ್ಥಾಪನ ಸಮಿತಿಯವರು ಅಭಿನಂದನೆ ಸಲ್ಲಿಸಿರುತ್ತಾರೆ.


Related posts

ಬರೆಂಗಾಯ ದ.ಕ.ಜಿ.ಪ.ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ : ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಾಗೂ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರುಗಳಿಗೆ ಗೌರವಾರ್ಪಣೆ

Suddi Udaya

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

Suddi Udaya

ಕೊಯ್ಯೂರು ಬಜಿಲ ಶಾಲಾ ಕಟ್ಟಡ ದುರಸ್ತಿಗಾಗಿ ಧರ್ಮಸ್ಥಳದಿಂದ 50 ಸಾವಿರ ದೇಣಿಗೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಕನ್ಯಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ದೇಣಿಗೆ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅನುಗ್ರಹ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Suddi Udaya

ವಾಣಿ ಕಾಲೇಜಿನಲ್ಲಿ ಕ್ವಾಟ್ರಿಕ್ಸ್-2k24 ಐಟಿ ಫೆಸ್ಟ್

Suddi Udaya
error: Content is protected !!