September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಯ್ಯೂರು ಸ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

ಕೊಯ್ಯೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು ದೇವಸ್ಥಾನ ಇದರ ಹಳೆ ವಿದ್ಯಾರ್ಥಿ ಸಂಘಕ್ಕೆ ಹೊಸ ಪದಾಧಿಕಾರಿಗಳ ಆಯ್ಕೆಯು ಆ. 26 ರಂದು ನಡೆಯಿತು.

ಗೌರವ ಸಲಹೆಗಾರರಾಗಿ ಅಶೋಕ್ ಭಟ್ ಅಗ್ರಸಾಲೆ, ಅನಂತಕೃಷ್ಣ ಭಟ್, ಡೀಕಯ್ಯ ಪೂಜಾರಿ, ಶ್ರೀಮತಿ ಶ್ಯಾಮಲಾ ಮುಖ್ಯೋಪಾಧ್ಯಾಯರು, ನವೀನ್ ಕುಮಾರ್ ವಾದ್ಯಕೋಡಿ, ಅಧ್ಯಕ್ಷರಾಗಿ ಚಂದ್ರಶೇಖರ ಮಾವಿನಕಟ್ಟೆ, ಉಪಾಧ್ಯಕ್ಷರಾಗಿ ನೋಣಯ್ಯ ಪೂಜಾರಿ, ಅದಿತಿ ಹೇಮಲ್ಕೆ, ಪ್ರಧಾನ ಕಾರ್ಯದರ್ಶಿಯಾಗಿ ವಿನಾಯಕ ಬೆದ್ರಲ್ಕೆ, ಜೊತೆ ಕಾರ್ಯದರ್ಶಿಗಳಾಗಿ ದೀಕ್ಷಿತ್ ಆರಂತೊಟ್ಟು,
ರವಿಚಂದ್ರ , ಕೋಶಾಧಿಕಾರಿಯಾಗಿ ಸದಾನಂದ ಗೌಡ ಅಡೆಂಕಿಲೊಟ್ಟು ಆಯ್ಕೆಯಾಗಿದ್ದಾರೆ.

ಸಭೆಯಲ್ಲಿ ಉಪಸ್ಥಿತರಿದ್ದ ಹಿರಿಯ ವಿದ್ಯಾರ್ಥಿಗಳನ್ನು ಸಂಘದ ಸಕ್ರಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುಧಾಕರ ದೇವಾಡಿಗ ವಹಿಸಿದ್ದರು. ವೇದಿಕೆಯಲ್ಲಿ ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನವೀನ್ ಕುಮಾರ್ ವಾದ್ಯಕೋಡಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಂತಕೃಷ್ಣ ಭಟ್ಟ ಹಾಗೂ ಎಸ್.ಡಿ.,ಎಮ್.ಸಿ ಉಪಾಧ್ಯಕ್ಷೆ ಶ್ರೀಮತಿ ಜಯಂತಿ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಮಾಜಿ ಕಾರ್ಯದರ್ಶಿ ಕೇಶವ ಗೌಡ ,ಗ್ರಾ.ಪಂ.ಸದಸ್ಯೆ ಶ್ರೀಮತಿ ವಿಶಾಲಕ್ಷಿ ಉಪಸ್ಥಿತರಿದ್ದರು.

ಶಿಕ್ಷಕ ಸೀತಾರಾಮ ಸ್ವಾಗತಿಸಿದರು ಮತ್ತು ಶಿಕ್ಷಕಿ ಶ್ರೀಮತಿ ಚೆನ್ನಮ್ಮ ನಿರೂಪಿಸಿ ವಂದಿಸಿದರು.

Related posts

ಗ್ರಾ.ಪಂ. ನೌಕರರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಬಗ್ಗೆ ಮಾರ್ಚ್ 1ರಿಂದ ರಾಜ್ಯಾದ್ಯಂತ ಪ್ರತಿಭಟನೆ: ಸಾರ್ವಜನಿಕ ಮಹತ್ವದ ವಿಚಾರದ ಬಗ್ಗೆ ವಿಧಾನಸಭೆ ಸಭಾಪತಿಯವರಿಗೆ ಪತ್ರ

Suddi Udaya

ವಾಲಿಬಾಲ್ ಪಂದ್ಯಾಟ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಹಾಗೂ ಪದ್ಮುಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಎರಡು ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನಾಳ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಮಚ್ಚಿನ: ಎ.30-ಮೇ.03, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya
error: Content is protected !!