July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಯ್ಯೂರು ಸ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

ಕೊಯ್ಯೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು ದೇವಸ್ಥಾನ ಇದರ ಹಳೆ ವಿದ್ಯಾರ್ಥಿ ಸಂಘಕ್ಕೆ ಹೊಸ ಪದಾಧಿಕಾರಿಗಳ ಆಯ್ಕೆಯು ಆ. 26 ರಂದು ನಡೆಯಿತು.

ಗೌರವ ಸಲಹೆಗಾರರಾಗಿ ಅಶೋಕ್ ಭಟ್ ಅಗ್ರಸಾಲೆ, ಅನಂತಕೃಷ್ಣ ಭಟ್, ಡೀಕಯ್ಯ ಪೂಜಾರಿ, ಶ್ರೀಮತಿ ಶ್ಯಾಮಲಾ ಮುಖ್ಯೋಪಾಧ್ಯಾಯರು, ನವೀನ್ ಕುಮಾರ್ ವಾದ್ಯಕೋಡಿ, ಅಧ್ಯಕ್ಷರಾಗಿ ಚಂದ್ರಶೇಖರ ಮಾವಿನಕಟ್ಟೆ, ಉಪಾಧ್ಯಕ್ಷರಾಗಿ ನೋಣಯ್ಯ ಪೂಜಾರಿ, ಅದಿತಿ ಹೇಮಲ್ಕೆ, ಪ್ರಧಾನ ಕಾರ್ಯದರ್ಶಿಯಾಗಿ ವಿನಾಯಕ ಬೆದ್ರಲ್ಕೆ, ಜೊತೆ ಕಾರ್ಯದರ್ಶಿಗಳಾಗಿ ದೀಕ್ಷಿತ್ ಆರಂತೊಟ್ಟು,
ರವಿಚಂದ್ರ , ಕೋಶಾಧಿಕಾರಿಯಾಗಿ ಸದಾನಂದ ಗೌಡ ಅಡೆಂಕಿಲೊಟ್ಟು ಆಯ್ಕೆಯಾಗಿದ್ದಾರೆ.

ಸಭೆಯಲ್ಲಿ ಉಪಸ್ಥಿತರಿದ್ದ ಹಿರಿಯ ವಿದ್ಯಾರ್ಥಿಗಳನ್ನು ಸಂಘದ ಸಕ್ರಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುಧಾಕರ ದೇವಾಡಿಗ ವಹಿಸಿದ್ದರು. ವೇದಿಕೆಯಲ್ಲಿ ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನವೀನ್ ಕುಮಾರ್ ವಾದ್ಯಕೋಡಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಂತಕೃಷ್ಣ ಭಟ್ಟ ಹಾಗೂ ಎಸ್.ಡಿ.,ಎಮ್.ಸಿ ಉಪಾಧ್ಯಕ್ಷೆ ಶ್ರೀಮತಿ ಜಯಂತಿ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಮಾಜಿ ಕಾರ್ಯದರ್ಶಿ ಕೇಶವ ಗೌಡ ,ಗ್ರಾ.ಪಂ.ಸದಸ್ಯೆ ಶ್ರೀಮತಿ ವಿಶಾಲಕ್ಷಿ ಉಪಸ್ಥಿತರಿದ್ದರು.

ಶಿಕ್ಷಕ ಸೀತಾರಾಮ ಸ್ವಾಗತಿಸಿದರು ಮತ್ತು ಶಿಕ್ಷಕಿ ಶ್ರೀಮತಿ ಚೆನ್ನಮ್ಮ ನಿರೂಪಿಸಿ ವಂದಿಸಿದರು.

Related posts

ಧಮ೯ಸ್ಥಳ ಶರಾವತಿ ವಸತಿ ಗೃಹದ ಎದುರು ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತ್ಯು

Suddi Udaya

ಡಿ.24: ಅಯ್ಯಪ್ಪ ವ್ರತಧಾರಿಗಳು ಮತ್ತು ಅಯ್ಯಪ್ಪ ಭಕ್ತರ ತಾಲೂಕು ಸಮಾವೇಶ: ಸಂಪತ್ ಬಿ. ಸುವರ್ಣ

Suddi Udaya

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಅಶ್ವಿನಿ ಎಸ್. ಶೆಟ್ಟಿ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಗೃಹ ಜ್ಯೋತಿ ಯೋಜನೆ: ಮನೆ ಮನೆಗೆ ತೆರಳಿ ಅರ್ಜಿ ಸ್ವೀಕಾರ – ಗೊಂದಲ ಬೇಡ, ಅರ್ಹರನ್ನು ಕೈಬಿಡುವುದಿಲ್ಲ: ಪದ್ಮನಾಭ ಸಾಲಿಯನ್

Suddi Udaya

ಮೇ 7ರಂದು ಮೇಲಂತಬೆಟ್ಟು ಜೇಸಿಂತ ಮೋನಿಸ್ ರವರ ಅಂತ್ಯಕ್ರಿಯೆ

Suddi Udaya

ಬಿಜೆಪಿ ತನ್ನ ಗುರಿಯನ್ನು ಮೀರಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಲಿದೆ: ಹರೀಶ್ ಪೂಂಜ

Suddi Udaya
error: Content is protected !!