23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ನೇತ್ರಾವತಿ ವಲಯ, ದ.ಕ ಜಿಲ್ಲೆ ಇದರ ವತಿಯಿಂದ ನಮ್ಮ ಮನೆ ಹವ್ಯಕ ಭವನ ಗುರುವಾಯನಕೆರೆಯಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನಾ ಕಾರ್ಯಕ್ರಮ ಆ.25ರಂದು ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಶಾಖೆಯ ಮುಖ್ಯ ಶಿಕ್ಷಕ ಡಾ.ಗೋವಿಂದ ಪ್ರಸಾದ್ ಕಜೆ ರವರು ವಹಿಸಿ, ಜೀವನದಲ್ಲಿ ಯೋಗದ ಅವಶ್ಯಕತೆ ಬಗ್ಗೆ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕಿನ ಶಾಖೆಯ ಮುಖ್ಯ ಶಿಕ್ಷಕ ಕೃಷ್ಣಾನಂದ ಪ್ರಾಸ್ತಾವಿಕವಾಗಿ ಮಾತನಾಡಿ ಎಸ್.ಪಿ.ವೈ.ಎಸ್.ಎಸ್ ಸಮಿತಿಯ ಪರಿಚಯವನ್ನು ಮಾಡಿದರು. ನಮ್ಮ ಮನೆ ಹವ್ಯಕ ಭವನದ ಅಧ್ಯಕ್ಷ ಕೃಷ್ಣ ಭಟ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.
ಸುಮಾರು 100ಕ್ಕೂ ಮಿಕ್ಕಿ ಯೋಗಾಸಕ್ತ ಬಂಧುಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಅಶ್ವಿನಿ ಪ್ರಾರ್ಥಿಸಿ, ಪ್ರೇಮಲತಾ ಗಣೇಶ್ ನಿರೂಪಿಸಿ, ಆಶಾ ಸ್ವಾಗತಿಸಿ, ಪ್ರಜ್ಞಾ ವಂದಿಸಿದರು.

Related posts

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

Suddi Udaya

ಕಳಿಯ ಗ್ರಾ.ಪಂ. ನ ಮೂರನೇ ವಾರ್ಡ್ ಮತ್ತು ನ್ಯಾಯತರ್ಪು ಗ್ರಾಮದ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಮರೋಡಿ: ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿತ

Suddi Udaya

ಧರ್ಮಸ್ಥಳ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಕು. ಶೌರ್ಯ ಎಸ್ ವಿ ಬರೆದಿರುವ ಚೊಚ್ಚಲ ಪುಸ್ತಕ ಪ್ರೀತಿ ಏಕೆ ಭೂಮಿ ಮೇಲಿದೆ ಬಿಡುಗಡೆ

Suddi Udaya

ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಮಹಾಸಭೆ

Suddi Udaya
error: Content is protected !!