22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ನೇತ್ರಾವತಿ ವಲಯ, ದ.ಕ ಜಿಲ್ಲೆ ಇದರ ವತಿಯಿಂದ ನಮ್ಮ ಮನೆ ಹವ್ಯಕ ಭವನ ಗುರುವಾಯನಕೆರೆಯಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನಾ ಕಾರ್ಯಕ್ರಮ ಆ.25ರಂದು ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಶಾಖೆಯ ಮುಖ್ಯ ಶಿಕ್ಷಕ ಡಾ.ಗೋವಿಂದ ಪ್ರಸಾದ್ ಕಜೆ ರವರು ವಹಿಸಿ, ಜೀವನದಲ್ಲಿ ಯೋಗದ ಅವಶ್ಯಕತೆ ಬಗ್ಗೆ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕಿನ ಶಾಖೆಯ ಮುಖ್ಯ ಶಿಕ್ಷಕ ಕೃಷ್ಣಾನಂದ ಪ್ರಾಸ್ತಾವಿಕವಾಗಿ ಮಾತನಾಡಿ ಎಸ್.ಪಿ.ವೈ.ಎಸ್.ಎಸ್ ಸಮಿತಿಯ ಪರಿಚಯವನ್ನು ಮಾಡಿದರು. ನಮ್ಮ ಮನೆ ಹವ್ಯಕ ಭವನದ ಅಧ್ಯಕ್ಷ ಕೃಷ್ಣ ಭಟ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.
ಸುಮಾರು 100ಕ್ಕೂ ಮಿಕ್ಕಿ ಯೋಗಾಸಕ್ತ ಬಂಧುಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಅಶ್ವಿನಿ ಪ್ರಾರ್ಥಿಸಿ, ಪ್ರೇಮಲತಾ ಗಣೇಶ್ ನಿರೂಪಿಸಿ, ಆಶಾ ಸ್ವಾಗತಿಸಿ, ಪ್ರಜ್ಞಾ ವಂದಿಸಿದರು.

Related posts

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ

Suddi Udaya

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

Suddi Udaya

ಗುರುವಾಯನಕೆರೆ: ಎಸ್.ಎಸ್.ಎಫ್. ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ದೀಪಾವಳಿ ಸ್ನೇಹ ಮಿಲನ – 2025

Suddi Udaya

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಶಕ್ತಿ ಯೋಜನೆಗೆ ಶಕ್ತಿ ತುಂಬಿದ ಪುರುಷರು

Suddi Udaya
error: Content is protected !!