ಬಂದಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಬಂದಾರು : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ (ರಿ.)ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಇದರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಯು ಆ 26ರಂದು ನಡೆಯಿತು.

ಭಜನಾ ಮಂಡಳಿಯ ಅಧ್ಯಕ್ಷ ದೇಜಪ್ಪಗೌಡ ಬೋಲ್ಜೆ ಇವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನಿಡಿದರು. ದೇವಸ್ಥಾನ ಟ್ರಸ್ಟ್ ನ ಅಧ್ಯಕ್ಷ ಸುಂದರ ಗೌಡ ನಿನ್ನಿಕಲ್ಲು, ರಂಜನ್ ಗೌಡ ಪೆಲತ್ತಿಮಾರ್, ತೀರ್ಥರಾಜ್ ಪೋಯ್ಯೋಲೆ, ಹಾಗೂ ದೇವಸ್ಥಾನ ಟ್ರಸ್ಟ್ ಹಾಗೂ ಭಜನಾ ಮಂಡಳಿ ಪದಾಧಿಕಾರಿಗಳು ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Comment

error: Content is protected !!